ಮುಖ್ಯಶಿಕ್ಷಕ ಖಾಸೀಂ ಸಾಹೇಬ್ ಹೇಳಿಕೆ
ಸಿದ್ದಾಪುರ: ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸಿದ್ದು, 8ನೇ ತರಗತಿ ವಿದ್ಯಾರ್ಥಿಗಳಿಗೆ ಬಾಳೆಹಣ್ಣು, ಮೊಟ್ಟೆ ನೀಡುವ ಯೋಜನೆ ಜಾರಿಗೊಳಿಸಿದೆ ಎಂದು ಮುಖ್ಯಶಿಕ್ಷಕ ಖಾಸೀಂ ಸಾಹೇಬ್ ಹೇಳಿದರು.
ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಬುಧವಾರ 8ನೇ ತರಗತಿ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಹಾಗೂ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಬೇಕೆಂಬ ನಿಟ್ಟಿನಲ್ಲಿ ಮಧ್ಯಾಹ್ನ ಬಾಳೆಹಣ್ಣು ಹಾಗೂ ಮೊಟ್ಟೆಯನ್ನು ವಾರದಲ್ಲಿ ಮೂರು ದಿನ ವಿತರಿಸಲಾಗುವುದು ಎಂದರು. ಶಿಕ್ಷಕರಾದ ಹೇಮಂತ್, ಹನುಮಂತಪ್ಪ, ಆನಂದ ಹಣವಾಳ, ಮುಖಂಡ ಶ್ರೀಕಾಂತ ಇತರರಿದ್ದರು.