ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನೇ ಆಯ್ಕೆ ಮಾಡಲಾಗಿದೆ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಸಂಘರ್ಷ ಇತ್ಯರ್ಥಗೊಂಡಂತಾಗಿದೆ.
ನೂತನ ಸಿಎಂ ಸಿದ್ದರಾಮಯ್ಯ ಎಂದು ಹೈಕಮಾಂಡ್ ನಿರ್ಧರಿಸಿದ್ದು, ಆ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಅಲಂಕರಿಸಲಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿಯೇ ನೂತನ ಸಿಎಂ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ ಎನ್ನಲಾಗಿದೆ.
ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಯ್ಕೆ ಜವಾಬ್ದಾರಿಯನ್ನು ನಿಭಾಯಿಸಿದ್ದು, ಸಂಧಾನ ಸೂತ್ರ ಹೆಣೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕೃತ ಘೋಷಣೆ ಬಳಿಕ ಪ್ರಮಾಣ ವಚನಕ್ಕೆ ಸಮಯ ನಿಗದಿಯಾಗಲಿದೆ. ಈ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಒಂದರ ಹಿಂದೊಂದರಂತೆ ಸಂಗತಿಗಳು ಬಹಿರಂಗಗೊಳ್ಳುತ್ತಿವೆ.
ಪ್ರಯಾಣಿಸುತ್ತಿದ್ದಾಕೆಗೆ ಬಸ್ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್