More

    17.5 ಕೋಟಿಗೆ ಕೋಲಾರ ಕ್ಷೇತ್ರ ಖರೀದಿಸಿದ ಸಿದ್ದರಾಮಯ್ಯ! ರವಿಕುಮಾರ್ ಕಟುಟೀಕೆ

    ಬೆಂಗಳೂರು: ಕೋಲಾರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್ ಶಾಸಕರು ತ್ಯಾಗ ಮಾಡಿಲ್ಲ, ಅದನ್ನು ಮಾರಾಟ ಮಾಡಿದ್ದಾರೆ, ಸಿದ್ದರಾಮಯ್ಯ ಅದನ್ನು ಕೊಂಡಿದ್ದಾರೆ ಎಂದು ಬಿಜೆಪಿ ಕುಟುಕಿದೆ.

    ಶ್ರೀನಿವಾಸ ಗೌಡರು ಮಾತನಾಡಿದ ತಾನೇಕೆ ಸೀಟು ತ್ಯಾಗ ಮಾಡಿದ್ದೆಂದು ತಿಳಿಸುವ ಆಡಿಯೋವನ್ನು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಬಿಡುಗಡೆ ಮಾಡಿ, ಇದಕ್ಕೆ ಸಿದ್ದರಾಮಯ್ಯ ಉತ್ತರ ಕೊಡಬೇಕೆಂದು ಆಗ್ರಹಿಸಿದರು.

    17.5 ಕೋಟಿ ರೂಪಾಯಿ ಸಾಲ ತೀರಿಸುವುದಾಗಿ ಹೇಳಿದ್ದಕ್ಕೆ ಸೀಟು ಬಿಟ್ಟುಕೊಟಿರುವುದು, ಎಂಎಲ್ಸಿ ಮಾಡಿ ಸಚಿವರನ್ನಾಗಿ ಮಾಡುವ ಭರವಸೆ ಕೊಟ್ಟ ವಿವರ ಆಡಿಯೋದಲ್ಲಿದೆ. ಸಾಲವನ್ನು ಹೇಗೆ ತೀರಿಸುತ್ತಾರೆಂದು ಹೇಳಲಿ ಎಂದು ಸವಾಲು ಹಾಕಿದರು.

    ಸಿದ್ದರಾಮಯ್ಯ ಅವರು ಅಲೆಮಾರಿ. ಎಲ್ಲಿಯೂ ನಿಜ ಹೇಳದ, ಅಭಿವೃದ್ಧಿ ಮಾಡದ ವ್ಯಕ್ತಿ. ವರುಣಾ ಇತ್ತು. ಚಾಮುಂಡೇಶ್ವರಿಗೆ ಬಂದರು, ಅಲ್ಲಿನ ಜನ 30 ಸಾವಿರ ಮತಗಳಿಂದ ಸೋಲಿಸಿ ಕಳುಹಿಸಿದರು. ಅಲ್ಲಿಂದ ಬಾದಾಮಿಗೆ ಬಂದರು. ಅಲ್ಲಿಂದ ಕೋಲಾರಕ್ಕೆ ಬಂದಿದ್ದಾರೆ. ಇದೀಗ ಕೊನೆ ಚುನಾವಣೆ ಎನ್ನುತ್ತ ಶ್ರೀನಿವಾಸ ಗೌಡರು ನನಗಾಗಿ ಸೀಟು ತ್ಯಾಗ ಮಾಡಿದ್ದಾಗಿ ಹೇಳಿದ್ದಾರೆ. ಯಾಕೆ ತ್ಯಾಗ ಮಾಡಿದ್ದಾರೆ. ಲಾಭ ಇಲ್ಲದೇ ತ್ಯಾಗ ಮಾಡಿದರೇ ಎಂದು ಪ್ರಶ್ನಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts