ಜನತೆ ಬಿಜೆಪಿಯ ಹಿಂದುತ್ವ ರಾಜಕೀಯವನ್ನು ತಿರಸ್ಕರಿಸಿ, ಕಾಂಗ್ರೆಸ್​ನ​ ಬಂಧುತ್ವವನ್ನು ಪುರಸ್ಕರಿಸಿದ್ದಾರೆ: ಸಿದ್ದರಾಮಯ್ಯ

ಮೈಸೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಕಾಂಗ್ರೆಸ್​ ಗೆಲುವಿನ ಬೆನ್ನಲ್ಲೇ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ತುಂಬು ಹೃದಯದ ಕೃತಜ್ಞತೆಗಳು ಈ ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ. ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. … Continue reading ಜನತೆ ಬಿಜೆಪಿಯ ಹಿಂದುತ್ವ ರಾಜಕೀಯವನ್ನು ತಿರಸ್ಕರಿಸಿ, ಕಾಂಗ್ರೆಸ್​ನ​ ಬಂಧುತ್ವವನ್ನು ಪುರಸ್ಕರಿಸಿದ್ದಾರೆ: ಸಿದ್ದರಾಮಯ್ಯ