More

    ವರುಣಾ ಮತ್ತು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ; ಆದರೆ…!

    ಕೋಲಾರ: ಈ ಬಾರಿಯ ವಿಧಾಸಭಾ ಚುನಾವಣೆಯಲ್ಲಿ ವರುಣಾ ಮತ್ತು ಕೋಲಾರ ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತೇನೆ. ಆದರೆ ಹೈಕಮಾಂಡ್​ನ ಅಂತಿಮ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಕೋಲಾರದಲ್ಲಿ ಮಾತನಾಡುತ್ತಾ, ವರುಣಾ ಸ್ವ-ಕ್ಷೇತ್ರವಾಗಿದ್ದು ಇದು ನನ್ನ ಕೊನೆಯ ಚುನಾವಣೆ. ಇಲ್ಲಿಂದಲೇ ರಾಜಕೀಯ ಜೀವನ ಆರಂಭವಾಗಿರುವುದು. ತಾಲೂಕು ಬೋರ್ಡ್, ಶಾಸಕ ಸ್ಥಾನಕ್ಕೆ ಸೇರಿದಂತೆ ಲೋಕಸಭಾ ಸ್ಥಾನಕ್ಕೂ ಸ್ಪರ್ಧೆ ಮಾಡಿದ್ದೇನೆ. ಆದ್ದರಿಂದ ವರುಣಾದಲ್ಲಿ ನಿಲ್ಲುತ್ತಿದ್ದೇನೆ. ಆದರೆ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ ಅದಕ್ಕೆ ಬದ್ಧನಾಗಿದ್ದೇನೆ. ನನ್ನ ಜನ ನನ್ನ ಹುಟ್ಟೂರಿನಿಂದ ಸ್ಪರ್ಧೆಸಬೇಕು ಎನ್ನುವುದು ನನ್ನ ಆಸೆ. ಎರಡು ಕಡೆಯಿಂದ ಅವಕಾಶ ಕೊಟ್ಟರೆ ಚುನಾವಣೆಗೆ ನಿಲ್ಲುವೆ ಎಂದರು.

    ಯಾರೇ ಬಂದರೂ ನಾನು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ವರುಣಾ, ಕೋಲಾರ ಮತ್ತು ರಾಜ್ಯದ 25 ಕಡೆ ಜನ ಕರೆಯುತ್ತಿದ್ದಾರೆ ಎಂದು ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದರು. ವರುಣಾದಿಂದ ವಿಜಯೇಂದ್ರರನ್ನು ಕಣಕ್ಕಿಳಿಸುವ ಬಗ್ಗೆ ಈ ಹಿಂದೆಯೂ ಮಾತನಾಡುತ್ತಾ ಸಿದ್ದರಾಮಯ್ಯ, ಎದುರಾಳಿಗಳ ಬಗ್ಗೆ ನಾನೆಂದೂ ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದ್ದರು.

    ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದರು.ಆದರೆ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ. ಸಿದ್ದರಾಮಯ್ಯ ಅವರಿಗೆ ಅಷ್ಟು ಸುಲಭವಾಗಿ ಗೆಲುವು ಸಿಗುವುದಿಲ್ಲ. ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಅವರು ಹೇಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts