ಬೆಂಗಳೂರು: 40% ಭ್ರಷ್ಟಾಚಾರದಿಂದ ಯುವಕರು ಉದ್ಯೋಗ ವಂಚಿತ ಎಂಬ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದು ಟ್ವೀಟ್ಅಲ್ಲಿ ಏನಿದೆ?
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ “ನಮ್ಮ ಯುವಕರು ರಾಜ್ಯ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರದ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಕಾರಣ ನಿರುದ್ಯೋಗಿಗಳಾಗಿದ್ದಾರೆ. ಇದರಿಂದಾಗಿ ಯುವ ಜನತೆಯ ಭವಿಷ್ಯ ಹಾಳಾಗಿದೆ. ಡಬಲ್ ಎಂಜಿನ್ ಸರ್ಕಾರ ನಮ್ಮವರನ್ನು ಕೈಬಿಟ್ಟಿದೆ” ಎಂದು ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ? ಮಾಹಿತಿ ಬಿಚ್ಚಿಟ್ಟ ಸಿಎಂ ಬೊಮ್ಮಾಯಿ!
ಖಡಕ್ ಉತ್ತರ ಕೊಟ್ಟ ಬೊಮ್ಮಾಯಿ
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿ “FICCI & EPFO ಪ್ರಕಾರ ಕಳೆದ 4 ವರ್ಷದಲ್ಲಿ 55 ಲಕ್ಷ ಉದ್ಯೋಗ ನೀಡಿದ್ದೇವೆ. ರಾಷ್ಟ್ರೀಯ ನಿರುದ್ಯೋಗ ಪ್ರಮಾಣ 4% ಇದೆ. ಆದ್ರೆ ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣ ಕೇವಲ 2.1%. ರಾಷ್ಟ್ರೀಯ ನಿರುದ್ಯೋಗದ ಪ್ರಮಾಣಕ್ಕಿಂತ ಅರ್ಧದಷ್ಟು ಕಡಿಮೆ ನಿರುದ್ಯೋಗ ರಾಜ್ಯದಲ್ಲಿದೆ. ಸತ್ಯಾಂಶವನ್ನು ಪರಿಶೀಲಿಸಿ” ಎಂದು ಸಿದ್ದರಾಮಯ್ಯಗೆ ರೀಟ್ವೀಟ್ ಮೂಲಕ ಸಿಎಂ ಬೊಮ್ಮಾಯಿ ಕೌಂಟರ್ ನೀಡಿದ್ದಾರೆ.