More

    ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್​ನಲ್ಲೂ ಸಂಚಲನ; ದೆಹಲಿಗೆ ಸಿದ್ದರಾಮಯ್ಯ ಪ್ರಯಾಣ..

    ಬೆಂಗಳೂರು: ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ತಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಹಲವು ಊಹಾಪೋಹಗಳು ಕೇಳಿಬಂದಿದ್ದಲ್ಲದೆ ಬಿಜೆಪಿ ಮಾತ್ರವಲ್ಲದೆ, ರಾಜ್ಯ ರಾಜಕೀಯದಲ್ಲೂ ಒಂದು ಸಂಚಲನ ಉಂಟಾಗಿತ್ತು. ಅಂಥದ್ದೇ ಒಂದು ಸಂಚಲನಕ್ಕೆ ಕಾರಣವಾಗುವಂತಹ ಬೆಳವಣಿಗೆ ಇದೀಗ ಕಾಂಗ್ರೆಸ್​ನಲ್ಲೂ ಕಾಣಿಸಿಕೊಂಡಿದೆ.

    ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರಿಷ್ಠ ರಾಹುಲ್​ ಗಾಂಧಿ ದೆಹಲಿಗೆ ಬರಲು ಹೇಳಿದ್ದು, ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ರಾಹುಲ್ ಗಾಂಧಿ ಬುಲಾವ್ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಶಾಸಕ ಜಮೀರ್ ಅಹಮದ್​ ಖಾನ್​ ಕೂಡ ದೆಹಲಿಗೆ ಹೊರಟಿದ್ದಾರೆ.

    ಕಾಂಗ್ರೆಸ್​ನಿಂದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎನ್ನುವ ಕುರಿತು ಈಗಾಗಲೇ ಹುಟ್ಟಿಕೊಂಡಿರುವ ಚರ್ಚೆ ಹಿನ್ನೆಲೆಯಲ್ಲಿ ಈ ಸಿದ್ದರಾಮಯ್ಯ ಅವರನ್ನು ಪಕ್ಷದ ಮುಖಂಡರು ದೆಹಲಿಗೆ ತೆರಳಿದ್ದಾರೆ. ಮಾತ್ರವಲ್ಲ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಣಗಳ ಮಧ್ಯೆ ಉಂಟಾಗಿರುವ ಮೇಲಾಟದ ಸಂಬಂಧವೂ ವಿಷಯ ಪ್ರಸ್ತಾಪವಾಗಲಿದೆ ಎನ್ನಲಾಗಿದ್ದು, ಒಟ್ಟಾರೆಯಾಗಿ ಈ ಭೇಟಿ ಕಾಂಗ್ರೆಸ್​​ನಲ್ಲೂ ಒಂದು ಸಂಚಲನ ಹುಟ್ಟುಹಾಕಿರುವ ಲಕ್ಷಣಗಳು ಗೋಚರಿಸಲಾರಂಭಿಸಿವೆ.

    ಸಿಎಂ ಹುದ್ದೆಗೆ ಮತ್ತೆ ಕತ್ತಿ ವರಸೆ | ಮುಖ್ಯಮಂತ್ರಿ ಸ್ಥಾನ ಖಾಲಿಯಾದರೆ ನೆಕ್ಸ್ಟ್​ ನಾನೇ ಇದ್ದೇನೆ: ಸಚಿವ ಉಮೇಶ್​ ಕತ್ತಿ

    ಕೋವಿಡ್​ನಿಂದ ಬಚಾವಾದರೂ ನೆಮ್ಮದಿ ಇಲ್ಲ; ಕಂಡುಬಂದಿದೆ ಮತ್ತೊಂದು ರೋಗ, ಬೋನ್​ ಡೆತ್!

    ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಪುರುಷರೇ ಹೆಚ್ಚು, ಏಕೆ?; ಗೃಹಿಣಿಯರಿಗೆ ಖುಷಿ ಕೊಟ್ಟೀತು ಈ ಅಧ್ಯಯನ ವರದಿ!

    ಗಂಡನನ್ನು ಕೊಲೆ ಮಾಡಿಸಿದ 9 ತಿಂಗಳ ಬಳಿಕ ಸಿಕ್ಕಿಬಿದ್ದ ಪತ್ನಿ-ಪ್ರಿಯಕರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts