ಬೆಂಗಳೂರು: ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ತಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಹಲವು ಊಹಾಪೋಹಗಳು ಕೇಳಿಬಂದಿದ್ದಲ್ಲದೆ ಬಿಜೆಪಿ ಮಾತ್ರವಲ್ಲದೆ, ರಾಜ್ಯ ರಾಜಕೀಯದಲ್ಲೂ ಒಂದು ಸಂಚಲನ ಉಂಟಾಗಿತ್ತು. ಅಂಥದ್ದೇ ಒಂದು ಸಂಚಲನಕ್ಕೆ ಕಾರಣವಾಗುವಂತಹ ಬೆಳವಣಿಗೆ ಇದೀಗ ಕಾಂಗ್ರೆಸ್ನಲ್ಲೂ ಕಾಣಿಸಿಕೊಂಡಿದೆ.
ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ದೆಹಲಿಗೆ ಬರಲು ಹೇಳಿದ್ದು, ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ರಾಹುಲ್ ಗಾಂಧಿ ಬುಲಾವ್ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಶಾಸಕ ಜಮೀರ್ ಅಹಮದ್ ಖಾನ್ ಕೂಡ ದೆಹಲಿಗೆ ಹೊರಟಿದ್ದಾರೆ.
ಕಾಂಗ್ರೆಸ್ನಿಂದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎನ್ನುವ ಕುರಿತು ಈಗಾಗಲೇ ಹುಟ್ಟಿಕೊಂಡಿರುವ ಚರ್ಚೆ ಹಿನ್ನೆಲೆಯಲ್ಲಿ ಈ ಸಿದ್ದರಾಮಯ್ಯ ಅವರನ್ನು ಪಕ್ಷದ ಮುಖಂಡರು ದೆಹಲಿಗೆ ತೆರಳಿದ್ದಾರೆ. ಮಾತ್ರವಲ್ಲ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಣಗಳ ಮಧ್ಯೆ ಉಂಟಾಗಿರುವ ಮೇಲಾಟದ ಸಂಬಂಧವೂ ವಿಷಯ ಪ್ರಸ್ತಾಪವಾಗಲಿದೆ ಎನ್ನಲಾಗಿದ್ದು, ಒಟ್ಟಾರೆಯಾಗಿ ಈ ಭೇಟಿ ಕಾಂಗ್ರೆಸ್ನಲ್ಲೂ ಒಂದು ಸಂಚಲನ ಹುಟ್ಟುಹಾಕಿರುವ ಲಕ್ಷಣಗಳು ಗೋಚರಿಸಲಾರಂಭಿಸಿವೆ.
ಕೋವಿಡ್ನಿಂದ ಬಚಾವಾದರೂ ನೆಮ್ಮದಿ ಇಲ್ಲ; ಕಂಡುಬಂದಿದೆ ಮತ್ತೊಂದು ರೋಗ, ಬೋನ್ ಡೆತ್!
ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಪುರುಷರೇ ಹೆಚ್ಚು, ಏಕೆ?; ಗೃಹಿಣಿಯರಿಗೆ ಖುಷಿ ಕೊಟ್ಟೀತು ಈ ಅಧ್ಯಯನ ವರದಿ!
ಗಂಡನನ್ನು ಕೊಲೆ ಮಾಡಿಸಿದ 9 ತಿಂಗಳ ಬಳಿಕ ಸಿಕ್ಕಿಬಿದ್ದ ಪತ್ನಿ-ಪ್ರಿಯಕರ!