More

    ಕಾಂಗ್ರೆಸ್ ಪ್ರಚಾರ ಸಭೆಗೆ ಬಿಜೆಪಿ ಕಾರ್ಯಕತರ ಅಡ್ಡಿ: ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಯಶವಂತಪುರದ ಬಿ.ಕೆ.ನಗರದಲ್ಲಿ ಮಂಗಳವಾರ (ಅ.27) ರಾತ್ರಿ ನಡೆದಿದೆ.

    ಅಭ್ಯರ್ಥಿ ಕುಸುಮಾ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಯಶವಂತಪುರ ಕಾರ್ಪೋರೇಟರ್ ಜಿ.ಕೆ. ವೆಂಕಟೇಶ್​ ಬೆಂಬಲಿಗರಿಂದ ಗಲಾಟೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

    ಇದನ್ನೂ ಓದಿ: ತಾರತಮ್ಯ ಆರೋಪ ಹೊತ್ತಿದ್ದ ಫೇಸ್​​ಬುಕ್​ ಇಂಡಿಯಾದ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್​ ರಾಜೀನಾಮೆ

    ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿಯ ಕಾರ್ಯಕರ್ತರು ಮೋದಿ… ಮೋದಿ ಎಂದು ಘೋಷಣೆ ಕೂಗಿದರೆ, ಕಾಂಗ್ರೆಸ್ ಕಾರ್ಯಕರ್ತರು ಹೌದು ಹುಲಿಯ ಎಂದು ಕೂಗಿದರು. ಈ ವೇಳೆ ಸ್ಥಳದಲ್ಲಿ ಕೊಂಚ ಬಿಗುವಿನ ವಾತಾವರಣ ಉಂಟಾಗಿತ್ತು.

    ಸಿದ್ದರಾಮಯ್ಯ ವಾಹನಕ್ಕೆ ಜಾಗ ಕೊಡದೇ ಗದ್ದಲ ಎಬ್ಬಿಸಲು ಜಿ.ಕೆ ವೆಂಕಟೇಶ್​ ಬೆಂಬಲಿಗರು ಯತ್ನಿಸಿದರು. ಈ ವೇಳೆ ಪೊಲೀಸ್ ಆಯುಕ್ತರಿಗೆ ಫೋನಾಯಿಸಿದ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಸ್ಥಳದಿಂದ ಬಿಜೆಪಿ ಕಾರ್ಯಕರ್ತರನ್ನು ವಾಪಸ್ ಕಳುಹಿಸಿದ ಹೊರತು ಸ್ಥಳದಿಂದ ಕದಲೋದಿಲ್ಲ ಅಂತ ಸಿದ್ದರಾಮಯ್ಯ ಪಟ್ಟು ಹಿಡಿದರು. ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ ಬಳಿಕ‌ ಸಿದ್ದರಾಮಯ್ಯ ಸ್ಥಳದಿಂದ ತೆರಳಿದರು.

    ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts