ವಿಜಯವಾಣಿ ಸುದ್ದಿಜಾಲ ಧಾರವಾಡ
ಮನೆ ಮನೆಗೆ ತೆರಳಿ ಗಣತಿ ಮಾಡದೆ ಮನೆಯೊಳಗೆ ಕುಳಿತು ಸಮಾಜ ಒಡೆಯಲು ರೂಪಿಸಿದ ಕುತಂತ್ರದ ಕೂಸೇ ಈ ಸಿದ್ದರಾಮಯ್ಯನವರ ಸರ್ಕಾರ ನಡೆಸಿದ ಜಾತಿಗಣತಿ. ಇದು ಗಣತಿ ಅಲ್ಲ. ಕಾಂಗ್ರೆಸ್ಸಿನ ಓಲೈಕೆ ರಾಜಕಾರಣ ಟೂಲ್ ಕಿಟ್ ಅಷ್ಟೇ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಟೀಕಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬ್ರಿಟಿಷರ ವಿಭಜಿಸಿ ಆಳುವ ನೀತಿಯನ್ನೇ ಮುಂದುವರಿಸಿರುವ ಕಾಂಗ್ರೆಸ್, ಈಗಲೂ ಸಮುದಾಯಗಳಲ್ಲಿ ಬಿರುಕು ಮೂಡಿಸುವ ಕುತಂತ್ರದಲ್ಲಿ ತೊಡಗಿದೆ. ಮುಸ್ಲಿಂ ಮತ ಬ್ಯಾಂಕ್ ಓಲೈಕೆಗಾಗಿ ಲಿಂಗಾಯತ ಸಮಾಜ ಒಡೆಯುವ ಹೊಸ ಯತ್ನವೇ ಈ ಜಾತಿ ಗಣತಿ ವರದಿ. 66.35 ಲಕ್ಷ ಲಿಂಗಾಯತರು ಹಾಗೂ 10.49 ಲಕ್ಷ ವೀರಶೈವ ಲಿಂಗಾಯತರನ್ನಾಗಿ ಪ್ರತ್ಯೇಕಿಸಿ ಬಣಜಿಗ, ಗಾಣಿಗ, ಸಾದರ, ಉಪ್ಪಾರ, ಕುಡು ಒಕ್ಕಲಿಗ, ಜಂಗಮ ಇತ್ಯಾದಿ ಉಪಪಂಗಡಗಳನ್ನು ವಿಭಜಿಸಿ, ಲಿಂಗಾಯತ ಸಮಾಜದ ಅಸ್ತಿತ್ವವನ್ನೇ ದುರ್ಬಲಗೊಳಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದು ಸಾಮಾಜಿಕ ನ್ಯಾಯ ಒದಗಿಸಲು, ನೀತಿ ರೂಪಿಸಲು ಮಾಡಿದ ಗಣತಿ ಅಲ್ಲ. ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಹೂಡಿರುವ ಕುತಂತ್ರದ ಮುಂದುವರೆದ ಭಾಗ. ಸಿದ್ದರಾಮಯ್ಯ ಕಳೆದ ಅವಧಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಲ್ಲಿ ಸಮಾಜ ಒಡೆಯಲು ಮಾಡಿದ ಯತ್ನ ವಿಫಲವಾದ್ದರಿಂದ ಈ ಬಾರಿ ಗಣತಿಯ ಹೆಸರಿನಲ್ಲಿ ಮತ್ತೊಮ್ಮೆ ಪ್ರಯತ್ನ ಮುಂದುವರೆಸಿದ್ದಾರೆ. ಇಂತಹ “ಅವೈಜ್ಞಾನಿಕ’, “ಅಪಾರದರ್ಶಕ’ ವರದಿ ಮೂಲಕ ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಹೊಸ ಅಸಮಾನತೆ ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ನಮ್ಮೆಲ್ಲರಿಗೂ ಎಚ್ಚರಿಕೆಯ ಘಂಟೆ ಎಂದು ಬೆಲ್ಲದ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅಣತಿಯಂತೆ ನಡೆದ ಒಡೆದಾಳುವ ಗಣತಿ

You Might Also Like
ನಿಮ್ಮ ಮುಖದಲ್ಲಿ ಬೇಡದ ಕೂದಲು ಇದೆಯೇ? ಈ ಸಲಹೆಗಳನ್ನು ಅನುಸರಿಸಿ..Unwanted Hair
Unwanted Hair : ಮುಖದ ಮೇಲೆ ಬೇಡದ ಕೂದಲು ಸಾಮಾನ್ಯ ಆದರೆ ಮಹಿಳೆಯರಿಗೆ ಮುಜುಗರದ ಸಮಸ್ಯೆಯಾಗಿದೆ.…
ಕೇವಲ 2 ಚಮಚ ಉಪ್ಪು ಇದ್ದರೆ ಸಾಕು ಮನೆಗೆ ಇರುವೆ, ಜಿರಳೆ ಬರದಂತೆ ತಡೆಯಬಹುದು..| Salt
Salt: ಉಪ್ಪು ಅಡಿಗೆಗೆ ರುಚಿಯನ್ನು ಮಾತ್ರ ನೀಡುವುದಿಲ್ಲ, ಅದು ನಿಮ್ಮ ಅಡುಗೆ ಮನೆಯ ಸ್ವಚ್ಛತೆಗೂ ಸಹಾಯ…
ಜಸ್ಟ್ ಈ ಸಣ್ಣ ಕೆಲಸ ಮಾಡಿ… ನಿಮ್ಮ ಮುಖದ ಮೇಲಿನ ಮೊಡವೆಗಳನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಿ! Glowing Skin
Glowing Skin : ಪ್ರತಿಯೊಬ್ಬರೂ ಆರೋಗ್ಯಕರ ಮತ್ತು ಹೊಳೆಯುವ ಚರ್ಮವನ್ನು ಬಯಸುತ್ತಾರೆ. ಆದರೆ, ಪ್ರಸ್ತುತ ಕಾಲದಲ್ಲಿ,…