ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಸಂಬಂಧಿಯೊಬ್ಬರ ಪುತ್ರನನ್ನು ಹತ್ಯೆ ಮಾಡಲಾಗಿದೆ.
ದಿ. ಧರ್ಮಸಿಂಗ್ ಅವರ ಸಂಬಂಧಿ ದೇವೇಂದರ್ ಸಿಂಗ್ ಅವರ ಪುತ್ರ ಸಿದ್ದಾರ್ಥ ದೇವೇಂದರ್ ಸಿಂಗ್(28) ಕೊಲೆಯಾದವರು. ಜ.19ರಂದು ಸಿದ್ದಾರ್ಥ ನಾಪತ್ತೆಯಾಗಿದ್ದರು.
ಜ.19ರ ಬೆಳಗಿನ ಜಾವ ಸ್ನೇಹಿತರನ್ನು ಭೇಟಿಯಾಗಲು ಅಮೆರಿಕಾಗೆ ಹೋಗುತ್ತಿರುವುದಾಗಿ ತಂದೆಗೆ ಸಿದ್ದಾರ್ಥ ದೇವೇಂದರ್ ಸಿಂಗ್ ಮೊಬೈಲ್ನಿಂದ ವಾಟ್ಸ್ಆ್ಯಪ್ ಮೆಸೇಜ್ ಬಂದಿತ್ತು. ಬಳಿಕ ಸಿದ್ದಾರ್ಥ್ ಮೊಬೈಲ್ ಸ್ವಿಚ್ ಆಫ್ ಆಗಿದೆ. ಸಿದ್ದಾರ್ಥ್ ಇತ್ತ ಅಮೆರಿಕಾಗೂ ಹೋಗಿಲ್ಲ, ಅತ್ತ ಮೊಬೈಲ್ ಫೋನ್ ಕೂಡ ಕನೆಕ್ಟ್ ಆಗಿಲ್ಲ. ಆತಂಕಗೊಂಡ ತಂದೆ, ಮಗನಿಗಾಗಿ ಹುಡಕಾಟ ನಡೆಸಿದರೂ ಸುಳಿವು ಸಿಗಲಿಲ್ಲ. ಹಾಗಾಗಿ ದೇವೇಂದರ್ ಸಿಂಗ್ ಅವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಿಸಿದ್ದರು. ಇದನ್ನೂ ಓದಿರಿ ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!
ಈ ನಡುವೆ ನೆಲ್ಲೂರು ಕಾಡಿನಲ್ಲಿ ಅಪರಿಚ ಶವ ಪತ್ತೆಯಾಗಿದ್ದು, ಈ ಬಗ್ಗೆ ನೆಲ್ಲೂರು ಪೊಲೀಸರ ಮಾಹಿತಿ ಆಧರಿಸಿ ಅಮೃತಹಳ್ಳಿ ಪೊಲೀಸರ ತಂಡ ಆಂಧ್ರದ ನೆಲ್ಲೂರಿನ ಅರಣ್ಯ ಪ್ರದೇಶಕ್ಕೆ ಜ.31ರಂದು ಭೇಟಿ ನೀಡಿತ್ತು.
ಸಿದ್ದಾರ್ಥ್ ದೇವೇಂದರ್ ಸಿಂಗ್ನನ್ನ ಕೊಲೆ ಮಾಡಲಾಗಿದ್ದು, ಈ ಸಂಬಂಧ ವಿನೋದ್ ಎಂಬಾತನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಶ್ಯಾಮ್ಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!
ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ