ನವದೆಹಲಿ: ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಇಂದು ಬೆಳಗ್ಗೆ ಉತ್ತರ ಪ್ರದೇಶ ವಿಶೇಷ ಟಾಸ್ಕ್ ಫೋರ್ಸ್ನ ಪೊಲೀಸರು ಎನ್ಕೌಂಟರ್ನಲ್ಲಿ ಕೊಂದಾಗಿನಿಂದಲೂ ಹಲವು ರಾಜಕೀಯ ಮುಖಂಡರು ತಮ್ಮದೇ ಆದ ದೃಷ್ಟಿಕೋನದಲ್ಲಿ ಅದರ ಬಗ್ಗೆ ಮಾತನಾಡುತ್ತಿದ್ದಾರೆ.
ಅದರಲ್ಲೂ ಪ್ರತಿಪಕ್ಷಗಳ ನಾಯಕರಂತೂ ಎನ್ಕೌಂಟರ್ನ್ನು ವಿರೋಧ ಮಾಡುತ್ತಿದ್ದಾರೆ. ಹಾಗೇ, ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಕೂಡ ಟ್ವೀಟ್ ಮೂಲಕ ಎನ್ಕೌಂಟರ್ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ.
ಹಲವು ಪ್ರತಿಕ್ರಿಯೆಗಳನ್ನು ನೀಡುವುದಕ್ಕಿಂತ ಮೌನವಾಗಿರುವುದೇ ಉತ್ತಮ. ಅದೆಷ್ಟು ಪ್ರಶ್ನೆಗಳು ಹಾಗೇ ರಕ್ಷಿಸಲ್ಪಟ್ಟವು ಎಂಬುದು ನನಗೆ ಗೊತ್ತಿಲ್ಲ ಎಂದು ಹಿಂದಿಯಲ್ಲಿ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ದುಬೆಯನ್ನು ಹತ್ಯೆ ಮಾಡಿದ್ದರಿಂದ ಅದೆಷ್ಟೋ ಪ್ರಶ್ನೆಗಳಿಗೆ ಉತ್ತರ ಸಿಗದಂತಾಗಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 24 ವರ್ಷದ ಸಿನಿಜರ್ನಿಯಲ್ಲಿ ಸುದೀಪ್ ಸಂಪಾದಿಸಿದ್ದೇನು?; ಅವರೇ ಹೇಳಿದ್ದಾರೆ ನೋಡಿ!!
ಉತ್ತರ ಪ್ರದೇಶ ಪೊಲೀಸರು ದುಬೆಯನ್ನು ಹತ್ಯೆ ಮಾಡಿದ್ದು, ಅದೆಷ್ಟೋ ಪ್ರತಿಪಕ್ಷಗಳ ನಾಯಕರ ಅಸಮಾಧಾನ, ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ದುಬೆಯ ಹಿಂದಿರುವ ರಾಜಕೀಯ ಮುಖಂಡರು ಯಾರು? ಅವನಿಗೆ ಯಾರೆಲ್ಲ ಗಣ್ಯರೊಂದಿಗೆ ಸಂಪರ್ಕ ಇತ್ತು ಎಂಬುದನ್ನು ಮುಚ್ಚಿಹಾಕಲೆಂದೇ ಈ ಎನ್ಕೌಂಟರ್ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಕೂಡ ಆರೋಪಿಸಿದ್ದಾರೆ. (ಏಜೆನ್ಸೀಸ್)
ವಿಕಾಸ್ ದುಬೆ ಎನ್ಕೌಂಟರ್ಗೆ ಮರುಗಿದ ಟಿಎಂಸಿ ಸಂಸದೆ; ನ್ಯಾಯವನ್ನೇ ಕೊಲ್ಲುತ್ತಿದ್ದಾರೆ ಯೋಗಿ ಜಿ ಎಂದ ಮಾಹುವಾ