ಲಕ್ಷ್ಮೇಶ್ವರದಲ್ಲಿ ರೇಷ್ಮೆ ಸಲಹಾ ಕೇಂದ್ರ ಕಚೇರಿ ಉದ್ಘಾಟನೆ

silk

ಲಕ್ಷ್ಮೇಶ್ವರ: ಪಟ್ಟಣದ ತಾಪಂ ಕಟ್ಟಡದಲ್ಲಿ ರೇಷ್ಮೆ ಇಲಾಖೆಯ ತಾಂತ್ರಿಕ ಸಲಹಾ ಕೇಂದ್ರದ ಕಚೇರಿಯನ್ನು ಶಾಸಕ ಡಾ.ಚಂದ್ರು ಲಮಾಣಿ ಸೋಮವಾರ ಉದ್ಘಾಟಿಸಿ ರೇಷ್ಮೆ ಬೆಳೆಗಾರರಿಗೆ ವಿವಿಧ ಪರಿಕರಗಳನ್ನು ವಿತರಿಸಿದರು.

blank

ನಂತರ ಮಾತನಾಡಿದ ಅವರು, ‘ಕಚೇರಿ ಉದ್ಘಾಟನೆಯಿಂದಾಗಿ ರೈತರ ಹಲವಾರು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಲಕ್ಷ್ಮೇಶ್ವರದಲ್ಲಿದ್ದ ರೇಷ್ಮೆ ಇಲಾಖೆ ಕಚೇರಿಯನ್ನು ಎರಡು ವರ್ಷಗಳ ಹಿಂದೆ ಬಂದ್ ಮಾಡಲಾಗಿತ್ತು. ಇದರಿಂದ ಈ ಭಾಗದ ಬೆಳೆಗಾರರಿಗೆ ತೊಂದರೆಯಾಗಿದ್ದು ಈ ಬಗ್ಗೆ ಕಚೇರಿಯ ಅವಶ್ಯಕತೆ ಮತ್ತು ಇಲ್ಲಿರುವ ಬೆಳೆಗಾರರಿಗೆ ಇದರಿಂದ ಆಗುವ ಪ್ರಯೋಜನವನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಮಂಜೂರಿ ಮಾಡಿಸುವ ಕಾರ್ಯ ಮಾಡಿದ್ದೇನೆ’ ಎಂದರು.

ಶಿರಹಟ್ಟಿಯ ರೇಷ್ಮೆ ಇಲಾಖೆ ವಿಸ್ತರಣಾಧಿಕಾರಿ ಪವಿತ್ರಾ ವಗ್ಗಣ್ಣವರ ಮಾತನಾಡಿ, ತಾಲೂಕಿನಲ್ಲಿ ಅಂದಾಜು 80ಕ್ಕಿಂತ ಹೆಚ್ಚು ರೇಷ್ಮೆ ಬೆಳೆಗಾರರಿದ್ದು ಅವರಿಗೆ ಸಲಹೆ ಸೂಚನೆ, ಉಪಕರಣಗಳು, ಚಂದ್ರಿಕೆ ಇತ್ಯಾದಿಗಳನ್ನು ನೀಡಲಾಗುತ್ತದೆ ಎಂದರು.

ತಹಸೀಲ್ದಾರ್ ವಾಸುದೇವ ವಿ. ಸ್ವಾಮಿ, ತಾಪಂ ಇಒ ಧರ್ಮರ ಕೃಷ್ಣಪ್ಪ, ಮಂಜನಾಥ ಗೌಡರ, ಕೇಶವ ಹಾವಿನಾಳ, ಪಿ.ಜಿ. ಕೊಳಲ, ಎನ್.ಸಿ. ಬಳಿಗಾರ, ಎಂ.ವಿ. ದೊಡ್ಡಮನಿ, ಎಂ.ಎಂ. ಕಳ್ಳಿಮನಿ ಇತರರಿದ್ದರು.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank