More

    ಮೃತನ ಕುಟುಂಬಕ್ಕೆ 2 ಲಕ್ಷ ರೂ. ಚೆಕ್ ವಿತರಣೆ

    ಸಿಂದಗಿ: ಧಾರವಾಡ ಜಿ.ಆರ್.ಗ್ರುಪ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕಿನ ಹಂಚಿನಾಳ ಗ್ರಾಮದ ಬಾಲಕೃಷ್ಣ ರಜಪೂತ ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದು, ಮೃತನ ಕುಟುಂಬಕ್ಕೆ ಗ್ರುಪ್ಸ್‌ನ ಮುಖ್ಯಸ್ಥ ಶಿವಾನಂದ ಪಾಟೀಲ ಸೋಮಜ್ಯಾಳ ವೈಯಕ್ತಿಕವಾಗಿ 2ಲಕ್ಷ ರೂ. ಚೆಕ್ ನೀಡಿ ಮಾನವೀಯತೆ ಮೆರೆದಿದ್ದಾರೆ.
    ರಾಜ್ಯದ ನಿರುದ್ಯೋಗ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಧಾರವಾಡ ಜಿ.ಆರ್.ಗ್ರುಪ್ಸ್ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಇಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಸರ್ಕಾರದ ಎಲ್ಲ ಸವಲತ್ತುಗಳನ್ನು ಒದಗಿಸಲಾಗತ್ತಿದೆ. ಅಲ್ಲದೆ ಇಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರ ಆಕಸ್ಮಿಕವಾಗಿ ಅಥವಾ ಅಪಘಾತದಲ್ಲಿ ಮೃತಪಟ್ಟರೆ ಸಂಸ್ಥೆ ಆ ಕುಟುಂಬಕ್ಕೆ ಸಹಾಯಹಸ್ತ ನೀಡುತ್ತದೆ. ಜತೆಗೆ ಸರ್ಕಾರದಿಂದ ಬರುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತಿದೆ ಎಂದು ಶಿವಾನಂದ ಪಾಟೀಲ ಸೋಮಜ್ಯಾಳ ಹೇಳಿದರು.
    ಪ್ರಶಾಂತಗೌಡ ಪಾಟೀಲ ಕನ್ನೋಳ್ಳಿ, ಜಿಪಂ ಸದಸ್ಯ ಮಹಾಂತಗೌಡ ಪಾಟೀಲ ಯರಗಲ್, ಮುತ್ತುರಾಜ ಕಲಶೆಟ್ಟಿ, ಪರಮಾನಂದ ಪಾರಗೊಂಡ, ಭೀಮನಗೌಡ ಬಿರಾದಾರ, ಮಹಾಂತೇಶ ಪರಗೊಂಡ ಪರಮಾನಂದ ಬಗಲಿ ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts