More

    ಸಿಂಧನೂರು ನಗರಕ್ಕೆ ನ.13ರಿಂದ ನಾಲ್ಕು ದಿನಕ್ಕೊಮ್ಮೆ ಕುಡಿವ ನೀರು ಸರಬರಾಜು: ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಮಾಹಿತಿ

    ಸಿಂಧನೂರು: ನಗರದ ಜನತೆಗೆ ಬಹುದಿನದ ಬೇಡಿಕೆಯಾಗಿದ್ದ ಕುಡಿವ ನೀರಿನ ಸಮಸ್ಯೆ ಪರಿಹರಿಸಲು ನಗರಸಭೆ ಆಡಳಿತ ಮಂಡಳಿ ನಿರ್ಧರಿಸಿದ್ದು, ನ.13 ರಿಂದ ನಾಲ್ಕು ದಿನಕ್ಕೊಮ್ಮೆ ಶುದ್ಧೀಕರಿಸಿದ ಕುಡಿವ ನೀರು ಪೂರೈಕೆ ಮಾಡಲಾಗುವುದೆಂದು ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ತಿಳಿಸಿದ್ದಾರೆ.

    ಈ ಕುರಿತು ಹೇಳಿಕೆ ನೀಡಿದ ಅವರು, ನಗರಸಭೆ ಆಡಳಿತ ಮಂಡಳಿ ವತಿಯಿಂದ ಕುಡಿವ ನೀರು, ನೈರ್ಮಲೀಕರಣ ಸ್ವಚ್ಛತೆ, ಬೀದಿ ದೀಪಗಳ ಅಳವಡಿಕೆ ಇನ್ನಿತರ ಮೂಲ ಸೌಕರ್ಯಗಳ ಜತೆಗೆ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನಹರಿಸಲಾಗುವುದು. 24/7 ಕುಡಿವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾರ್ಗದರ್ಶನದಲ್ಲಿ ಚರ್ಚಿಸಿ, ಈಗಿರುವ ವ್ಯವಸ್ಥೆಯಂತೆ 8 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದ ಸಿಂಧನೂರಿನ ಜನತೆಗೆ ತೀವ್ರ ತೊಂದರೆಯಾಗುತ್ತಿದ್ದು, ಈ ವ್ಯವಸ್ಥೆ ಬದಲಾಯಿಸಿ 4 ದಿನಕ್ಕೊಮ್ಮೆ ಕುಡಿವ ನೀರು ಸರಬರಾಜು ಮಾಡಲು ನಿರ್ಧರಿಸಲಾಗಿದೆ. ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts