ಸಿಂಧನೂರು: ವಿದ್ಯಾರ್ಥಿಗಳು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಬೇಕೆಂದು ವನಸಿರಿ ಫೌಂಡೇಷನ್ ಸಂಸ್ಥಾಪಕ ಅಮರೇಗೌಡ ಮಲ್ಲಾಪುರ ಹೇಳಿದರು.
ನಗರದ ರಾಜೇಂದ್ರಕುಮಾರ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು. ಕಸಾಪ ತಾಲೂಕು ಘಟಕ ಸಾಹಿತ್ಯಕ ಕಾರ್ಯಕ್ರಮಗಳ ಮೂಲಕ ಕನ್ನಡದ ಮನಸುಗಳನ್ನು ಒಗ್ಗೂಡಿಸಿಕೊಂಡು ಹೋಗುತ್ತಿದೆ ಎಂದರು. ಡಾ.ವಿಶ್ವನಾಥ ಪತ್ತಾರ ಗುಡಿಹಾಳ, ಮಾಜಿ ಸೈನಿಕ ವೀರೇಶ ಯಾದವ್, ಭಾರತೀಯ ಸಂಸ್ಕಾರ, ರಾಷ್ಟ್ರಪ್ರೇಮ ಹಾಗೂ ಯುವಜನತೆ ಕುರಿತು ಉಪನ್ಯಾಸ ನೀಡಿದರು.
ಫೋಟೊ12ಎಸ್ಎನ್ಡಿ-01
ಸಿಂಧನೂರಿನಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ವನಸಿರಿ ಫೌಂಡೇಷನ್ ಸಂಸ್ಥಾಪಕ ಅಮರೇಗೌಡ ಮಲ್ಲಾಪುರ ಭಾನುವಾರ ಉದ್ಘಾಟಿಸಿದರು. ಕಸಾಪ ತಾಲೂಕು ಅಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ, ಮುಖ್ಯಶಿಕ್ಷಕಿ ತುಳಜಾ ಭವಾನಿ, ಸೇವಾ ಸಿರಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪ್ರದೀಪ್ ಪೂಜಾರಿ ಇತರರಿದ್ದರು.