ರಾಯಚೂರು: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಸಿಂಧನೂರಿನ ಮುಳ್ಳೂರು ಕ್ರಾಸ್ ಬಳಿ ಸಂಭವಿಸಿದೆ.
ಲಾರಿ ಚಾಲಕ ಮಹಾರಾಷ್ಟ್ರ ಮೂಲದ ರಾಹುಲ್ ಭಾಸ್ಕರ್ (25) ಹಾಗೂ ಕ್ಲೀನರ್ ವೈಜನಾಥ್ (28) ಸ್ಥಳದಲ್ಲೇ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕು ಸಾಗಿಸುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆಯಿತು. ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ತೀವ್ರ ಗಾಯಗೊಂಡು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಕೇಸು ದಾಖಲಾಗಿದೆ. (ದಿಗ್ವಿಜಯ ನ್ಯೂಸ್)