More

    ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ಕಾಂಗ್ರೆಸ್ ಕೆಂಡ

    ಸಿಂಧನೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿರುವ ಸಚಿವ ಡಾ.ಅಶ್ವತ್ಥನಾರಾಯಣರನ್ನು ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಶುಕ್ರವಾರ ಮನವಿ ಸಲ್ಲಿಸಿತು.

    ಸಾರ್ವಜನಿಕ ಸಭೆಯಲ್ಲಿ ಸಚಿವ ಅಶ್ವತ್ಥನಾರಾಯಣ, ಟಿಪ್ಪು ಸುಲ್ತಾನ್ ರೀತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇದು ಅಕ್ಷಮ್ಯವಾಗಿದ್ದು, ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಜನಪರ ಯೋಜನೆಗಳನ್ನು ನೀಡಿದ್ದಾರೆ. ಜನರ ಸರ್ವೋತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಸಚಿವರು ಅವರ ವಿರುದ್ಧ ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಪಂ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಉಪಾಧ್ಯಕ್ಷ ಮುರ್ತುಜ್‌ಹುಸೇನ, ಸದಸ್ಯರಾದ ಎಚ್.ಬಾಷಾ, ಆಲಂಬಾಷಾ, ಶಬ್ಬೀರ್ ನಾಯಕ, ಶೇಖರಪ್ಪ ಗಿಣಿವಾರ, ಮುನೀರ್ ಪಾಷಾ, ಪ್ರಮುಖರಾದ ರಾಜಗೌಡ ಬಾದರ್ಲಿ, ಚಂದ್ರಶೇಖರ ಕನಸಾವಿ, ದಶರಥರಡ್ಡಿ ಚನ್ನಳ್ಳಿ, ನಿರುಪಾದೆಪ್ಪ ಗುಡಿಹಾಳ, ಹನುಮೇಶ ನಾಯಕ, ಶೇಖರಪ್ಪ ಧುಮತಿ, ದುರುಗಪ್ಪ ಕಟಾಲಿ, ಕನಕಪ್ಪ ನಾಯಕ, ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಣಿ ಮಾಲಿ ಪಾಟೀಲ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts