More

    ರಸ್ತೆ ಅಭಿವೃದ್ಧಿಗೆ ಟೆಂಡರ್ ಪ್ರಕ್ರಿಯೆ ವಿಳಂಬ

    ಸಿಂಧನೂರು: ತಾಲೂಕಿನ ಹಂಚಿನಾಳಕ್ಯಾಂಪ್‌ನಿಂದ ಕೆ.ಹಂಚಿನಾಳವರೆಗಿನ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ದುರಸ್ತಿಗೆ ಈಗಾಗಲೇ ಅನುದಾನ ಕೂಡ ಬಿಡುಗಡೆ ಆಗಿದೆ. ಆದರೆ ಅಧಿಕಾರಿಗಳ ನಿರ್ಲಕ್ಷೃದಿಂದ ಟೆಂಡರ್ ಪ್ರಕ್ರಿಯೆ ನಡೆಯದೆ ರಸ್ತೆ ಅಭಿವೃದ್ಧಿಗೆ ಇನ್ನೂ ಕಾಲ ಕೂಡಿಬಂದಿಲ್ಲ.

    ಗ್ರಾಮೀಣ ಭಾಗದ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಸೃಷ್ಟಿಯಾಗಿವೆ. ಈ ಗುಂಡಿಗಳ ನಡುವೆಯೇ ರಸ್ತೆ ಹುಡುಕುವ ಸ್ಥಿತಿ ನಿರ್ಮಾಣವಾಗಿದೆ. ಒಂದು ಗುಂಡಿ ತಪ್ಪಿಸುವುದರೊಳಗೆ ಮತ್ತೊಂದು ಗುಂಡಿ ಎದುರಾಗುತ್ತದೆ. ಇದರಿಂದ ಕೆ.ಹಂಚಿನಾಳ ಗ್ರಾಮದ ರಸ್ತೆಯಲ್ಲಿ ವಾಹನ ಚಾಲನೆ ಸವಾಲಿನ ಕೆಲಸವಾಗಿದೆ.

    ಈ ರಸ್ತೆ ಡಾಂಬಾರ್ ಕಂಡು ಹಲವು ವರ್ಷಗಳೇ ಉರುಳಿವೆ. ಡಾಂಬರ್ ಸಂಪೂರ್ಣ ಕಿತ್ತುಹೋಗಿದ್ದು, ಗುಂಡಿಗಳು ಅಪಾಯಕ್ಕೆ ಆಹ್ವಾನಿಸುತ್ತಿವೆ. ಈ ರಸ್ತೆಯಲ್ಲಿ ಚಲಿಸುವ ವಾಹನಗಳು ಎಲ್ಲಿ ಬೀಳುತ್ತವೆಯೋ ಎಂಬ ಆತಂಕ ಪ್ರಯಾಣಿಕರನ್ನು ಕಾಡುತ್ತಿದೆ. ಈ ಭಾಗದ ಮಕ್ಕಳು ವಾಹನಗಳಲ್ಲಿ ಶಾಲೆಗೆ ಹೋಗಿ ಮರಳಿ ಮನೆಗೆ ಬರುವವರೆಗೂ ಪಾಲಕರು ಆತಂಕದಲ್ಲಿರುತ್ತಾರೆ.

    ಹದಗೆಟ್ಟ ರಸ್ತೆಯಲ್ಲಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಹಲವು ಗುಂಡಿಗಳು ಬಿದ್ದಿದ್ದು, ರಸ್ತೆ ಹದೆಗೆಟ್ಟಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಕೂಡಲೇ ರಸ್ತೆ ದುರಸ್ತಿ ಮಾಡಿ, ಸಂಚಾರಕ್ಕೆ ಅನಕೂಲ ಮಾಡಿಕೊಡಬೇಕಿದೆ.
    | ಶಂಬನಗೌಡ, ಗ್ರಾಪಂ ಸದಸ್ಯ, ಕೆ.ಬಸಾಪುರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts