ರಾಯಚೂರು: ಸಿಂಧನೂರು ತಾಲೂಕಿನಲ್ಲಿರುವ ಬಾಂಗ್ಲಾ ವಲಸಿಗರಿಗೆ ಪೌರತ್ವ ಪ್ರಮಾಣ ಪತ್ರ ವಿತರಣೆಗೆ ದಿನ ನಿಗದಿ ಮಾಡುವಂತೆ ಕೋರಿ ಸಂಸದ ಕರಡಿ ಸಂಗಣ್ಣ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಸಿಂಧನೂರು ತಾಲೂಕಿನಲ್ಲಿರುವ ಆರ್ ಎಚ್ ಕ್ಯಾಂಪ್ಗಳಲ್ಲಿ ಅಂದಾಜು 20 ಸಾವಿರ ಬಾಂಗ್ಲಾ ವಲಸಿಗರು ಇದ್ದಾರೆ. ಇವರು ಭಾರತೀಯ ಪೌರತ್ವ ಪಡೆಯಲು ಅರ್ಹರಾಗಿದ್ದಾರೆ. ಹೀಗಾಗಿ ಜ.15ರೊಳಗೆ ಸಿಂಧನೂರಿನಲ್ಲಿ ಪೌರತ್ವ ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಸಬೇಕು ಎಂದು ಅವರು ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿ ದಿನ ನಿಗದಿಪಡಿಸಿ ಎಂದು ಸಂಸದರು ಕೋರಿದ್ದಾರೆ. (ದಿಗ್ವಿಜಯ ನ್ಯೂಸ್)