ಚೆನ್ನೈ: ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ, ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ನೆರವೇರಿತು.
ಸಂಗೀತ ಸ್ವರ ಲೋಕದ ಮಾಂತ್ರಿಕ ಎಂದೇ ಪ್ರಸಿದ್ಧರಾಗಿದ್ದ ಎಸ್ಪಿಬಿ ಅವರು ಅನಾರೋಗ್ಯದಿಂದ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಎಸ್ಪಿಬಿ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ರಾತ್ರಿ ತಿರುವಳ್ಳೂರು ಜಿಲ್ಲೆಯ ತಾಮರೈಪಾಕಂನಲ್ಲಿರುವ ಅವರ ತೋಟದ ಮನೆಗೆ ಸ್ಥಳಾಂತರಿಸಲಾಗಿತ್ತು. ಮನೆಯ ಬಳಿ ಜಮಾಯಿಸಿದ ಸಾವಿರಾರು ಅಭಿಮಾನಿಗಳು ಎಸ್ಪಿಬಿ ಅವರ ಅಂತಿಮ ದರ್ಶನ ಪಡೆದರು. ಬಾಲು ಫಾರ್ಮ್ಹೌಸ್ನಲ್ಲೇ ಎಸ್ಪಿಬಿ ಅಂತ್ಯಕ್ರಿಯೆ ಮಾಡಲಾಯಿತು. ಅವರ ಪುತ್ರ ಚರಣ್ ಅವರು ಅಂತ್ಯಕ್ರಿಯೆ ವಿಧಿವಿಧಾನಗಳನ್ನು ನೆರವೇರಿಸಿದರು. ಎಸ್ಪಿಬಿ ಅಂತ್ಯಕ್ರಿಯೆಯಲ್ಲಿ ಅನೇಕ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು. ಬಾರದ ಲೋಕಕ್ಕೆ ತೆರಳಿದ ಸಂಗೀತ ಲೋಕದ ‘ಧ್ರುವತಾರೆ’ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನು ನೆನಪು ಮಾತ್ರ.
PHOTO GALLERY| ಸ್ವರ ಮಾಂತ್ರಿಕ ಎಸ್.ಪಿ. ಬಾಲಸುಬ್ರಹ್ಮಣ್ಯಂರ ಅಪರೂಪದ ಕ್ಷಣಗಳು