ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಹರಿಯಾಣದ ಗಡಿಯಾಗಿರುವ ಸಿಂಘುನಲ್ಲಿ ಕಳೆದ ಎರಡು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಷ್ಟು ದಿನ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದ ಸಿಂಘು ಗ್ರಾಮಸ್ಥರು ಇದೀಗ ರೈತರ ವಿರುದ್ಧ ತಿರುಗಿ ಬಿದ್ದಿದ್ದು, ಹೆದ್ದಾರಿ ಬಿಟ್ಟು ಹೊರಟು ಹೋಗಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ತನ್ನಿಂದ ಗರ್ಭಿಣಿಯಾದ ಬಾಲಕಿಯನ್ನು ಮದ್ವೆಯಾಗ್ತೇನೆಂದ ವಿವಾಹಿತ- ಅಮ್ಮನ ಸಮ್ಮತಿ; ಕೋರ್ಟ್ ನೀಡಿತು ಜಾಮೀನು
ಗಣರಾಜ್ಯೋತ್ಸವದ ದಿನದಂದು ನಡೆದ ಹಿಂಸಾಚಾರವನ್ನು ಕಂಡು ಅಸಮಾಧಾನಗೊಂಡಿರುವ ಗ್ರಾಮಸ್ಥರು, ರೈತರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಎರಡೂ ರಾಜ್ಯಗಳ ಮಧ್ಯೆ ಸಂಪರ್ಕ ಕಡಿತ ಮಾಡಲಾಗಿದೆ. ಇದರಿಂದಾಗಿ ನಮ್ಮ ಜನರು ಓಡಾಡುವುದಕ್ಕೆ ಕಷ್ಟವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಶೀಘ್ರವೇ ಗಡಿಯನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಾಳೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೋರಾಟ ನಡೆಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್)
ಪ್ಲೀಸ್ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಮೆನೋಪಾಸ್ ನಂತರ ಪತ್ನಿಗೆ ಲೈಂಗಿಕಾಸಕ್ತಿಯೇ ಇಲ್ಲ- ನನಗೆ ದಿಕ್ಕೇ ತೋಚದಾಗಿದೆ; ಇದಕ್ಕೆ ಪರಿಹಾರವಿಲ್ಲವೆ?