More

    ಸಿರಗುಪ್ಪ ತಾಲೂಕಿನಲ್ಲಿ ಸಾಲಬಾಧೆ ತಾಳದೆ ರೈತ ಆತ್ಮಹತ್ಯೆಗೆ ಶರಣು

    ಸಿರಗುಪ್ಪ: ಸಾಲಬಾಧೆ ತಾಳದೆ ತಾಲೂಕಿನ ನಂ.64 ಹಳೇಕೋಟೆಯ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆ.ರುದ್ರ(23) ಮೃತ. ರೈತನ ಹೆಸರಿನಲ್ಲಿ 1.86 ಸೆಂಟ್ಸ್ ಭೂಮಿ ಇದ್ದು, ನಗರದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದಾರೆ. ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಭತ್ತ ಸಂಪೂರ್ಣ ಹಾನಿಗೀಡಾಗಿತ್ತು. ಇದರಿಂದ ಮನನೊಂದು ಮಂಗಳವಾರ ಮಧ್ಯಾಹ್ನ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿದ್ದಾರೆ. ತಕ್ಷಣವೇ ವಿಮ್ಸ್‌ಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಬುಧವಾರ ಅಸುನೀಗಿದ್ದಾರೆ. ಈ ಕುರಿತು ಕುಟುಂಬ ಸದಸ್ಯರು ನೀಡಿದ ದೂರಿನ ಮೇರೆಗೆ ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts