ಬೆಳಗಾವಿ : ಸಿಡಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡ (ಎಸ್ಐಟಿ) ನೋಟೀಸ್ ನೀಡಿದೆ.
ಕರೊನಾ ಪಾಸಿಟೀವ್ ಬಂದಿದ್ದರಿಂದ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಗೋಕಾಕ್ನ ತಮ್ಮ ಮನೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲು ಇಬ್ಬರು ಎಸ್ಐಟಿ ಅಧಿಕಾರಿಗಳು ಇಂದು ಗೋಕಾಕ್ಗೆ ಆಗಮಿಸಿ, ಅವರ ಗೃಹಕಚೇರಿಗೆ ಭೇಟಿ ನೀಡಿದರು ಎನ್ನಲಾಗಿದೆ.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್ಗೆ ಸ್ಫೋಟಕ ತಿರುವು: ಉಲ್ಟಾ ಹೊಡೆದ ಯುವತಿ
ಆದರೆ ರಮೇಶ್ ಜಾರಕಿಹೊಳಿ ಅವರು ಲಭ್ಯವಾಗದಿದ್ದರಿಂದ, ಸಹೋದರ ಬಾಲಚಂದ್ರ ಜಾರಕಿಹೊಳಿ ಅವರ ಕಚೇರಿಗೆ ತೆರಳಿದ ಅಧಿಕಾರಿಗಳು ಏಪ್ರಿಲ್ 20 ರಂದು 4 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ ಎನ್ನಲಾಗಿದೆ.
ಕೆಲಸದ ಆಮಿಷವೊಡ್ಡಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮೋಸ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಆರೋಪಿಸಿದ್ದಳು. ಈ ಕುರಿತು ಈಗಾಗಲೇ ಯುವತಿಯ ಸುದೀರ್ಘ ವಿಚಾರಣೆ ನಡೆಸಿರುವ ಎಸ್ಐಟಿ, ಆಕೆ ವಾಸವಾಗಿದ್ದ ಬೆಂಗಳೂರಿನ ಪಿಜಿಗೆ ಭೇಟಿ ನೀಡಿ ಅಲ್ಲಿಂದಲೂ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಇದೀಗ ರಮೇಶ್ ಜಾರಕಿಹೊಳಿ ಅವರ ವಿಚಾರಣೆಗೆ ಸಮಯ ನಿಗದಿ ಮಾಡಿದೆ ಎನ್ನಲಾಗಿದೆ.
ಸಾವಿನಲ್ಲೂ ಕಲೆ ಅರಳಿದೆ ! ಕಾಫಿನ್ಗಳಿಗೆ ರಂಗು ತುಂಬುವ ಕಲಾವಿದರು !
ಹುಷಾರ್ ! ಕರೊನಾ ವೈರಸ್ ಗಾಳಿಯ ಮೂಲಕ ಹರಡುತ್ತೆ ಎನ್ನುತ್ತಿದೆ ತಜ್ಞರ ವರದಿ !