ಆಂಧ್ರಪ್ರದೇಶ: ಇಂದು ಮುಂಜಾನೆ ಲಾರಿ – ಆಟೋ ರಿಕ್ಷಾ ನಡುವಿನ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಈ ಅಪಘಾತ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ.
ಗುಡೂರು ಕಡೆಯಿಂದ ಬರುತ್ತಿದ್ದ ಲಾರಿ ತೆಲಂಗಾಣದ ನಲ್ಗೊಂಡ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ರಿಕ್ಷಾದಲ್ಲಿದ್ದ 6 ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಇನ್ನು 6 ಮಂದಿ ಗಾಯಗೊಂಡಿದ್ದಾರೆ.
ತೆಲಂಗಾಣದ ಮಹಿಳೆಯರು ರಾಜ್ಯದ ಪಲ್ನಾಡು ಜಿಲ್ಲೆಯ ಪುಲಿಪಾಡು ಗ್ರಾಮಕ್ಕೆ ಮೆಣಸಿನಕಾಯಿ ಕೊಯ್ಲು ಮಾಡಲು ತೆರಳುತ್ತಿದ್ದಾಗ ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ. ಗುಡೂರು ಕಡೆಯಿಂದ ಲಕ್ನೋಗೆ ಹೋಗುತ್ತಿದ್ದ ನಿಂಬೆಹಣ್ಣು ತುಂಬಿದ ಟ್ರಕ್ ಮುಂಜಾನೆ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ವೇಗವಾಗಿ ಹೋಯಿತು.
ಇದನ್ನೂ ಓದಿ: ದರೋಡೆಗೆ ಬಂದು ಕಂಠಪೂರ್ತಿ ಕುಡಿದು ಮನೆ ಮಾಲೀಕನ ಬೆಡ್ರೂಂನಲ್ಲೇ ನಿದ್ರೆಗೆ ಜಾರಿದ ಕಳ್ಳ!
ಅಪಘಾತ ಸ್ಥಳದಿಂದ ಲಾರಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಲಾರಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ತೆಲಂಗಾಣದ ಮಿರಿಯಾಲಗುಡಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ಆಯ್ಕೆಯಲ್ಲಿ ಬಿಗ್ ಟ್ವಿಸ್ಟ್; ಮುಂದಿನ ಮುಖ್ಯಮಂತ್ರಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ ಎಂದ ಸುರ್ಜೇವಾಲ