ಹುಬ್ಬಳ್ಳಿ : ಸ್ಮಾರ್ಟ್ಸಿಟಿ ಯೋಜನೆಯಡಿ ಹುಬ್ಬಳ್ಳಿಯಲ್ಲಿ ನಿರ್ವಿುಸುತ್ತಿರುವ ಹಲವಾರು ಕಾಮಗಾರಿಗಳು ಕಳಪೆ ಮಟ್ಟದಿಂದ ಕೂಡಿದ್ದಾವೆ ಎಂಬ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ಆರೋಪಗಳ ಮಧ್ಯೆಯೇ, ಈ ಯೋಜನೆಯಡಿ ನಿರ್ವಿುಸಿರುವ ವಿದ್ಯುತ್ ಕಂಬಗಳು ಬಿದ್ದಿರುವುದು ಈ ಆರೋಪಗಳಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.
ಗೋಕುಲ ರಸ್ತೆ ಡಾಲರ್ಸ್ ಕಾಲನಿಯಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ವಿದ್ಯುತ್ ಕಂಬಗಳನ್ನು ನಿಲ್ಲಿಸಲಾಗಿತ್ತು. ಕಳೆದ ನಾಲ್ಕೈದು ದಿನಗಳ ಹಿಂದೆ ಇಲ್ಲಿನ ಹಲವಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಸ್ಮಾರ್ಟ್ಸಿಟಿ ಯೋಜನೆಯಡಿ ನಿರ್ವಿುಸಿರುವ ಹಲವಾರು ಸೌಲಭ್ಯಗಳನ್ನು ಪಾಲಿಕೆಗೆ ಹಸ್ತಾಂತರಿಸಿಕೊಳ್ಳಲು ಈ ಹಿಂದಿನ ಮೇಯರ್ ಈರೇಶ ಅಂಚಟಗೇರಿ ನಿರಾಕರಿಸಿದ್ದರು. ಸೌಲಭ್ಯಗಳು ಕಳಪೆ ಮಟ್ಟದ್ದಾಗಿವೆ ಎಂದು ಅವರು ಬಹಿರಂಗ ಆರೋಪವನ್ನೂ ಮಾಡಿದ್ದರು.
ಇದೆಲ್ಲದರ ಮಧ್ಯೆ ಈ ಯೋಜನೆಯಡಿ ನಿರ್ವಿುಸಿರುವ ಹಲವಾರು ಸೌಲಭ್ಯಗಳು ಮೇಲಿಂದ ಮೇಲೆ ಹದಗೆಡುತ್ತಿರುವುದು ಕಾಮಗಾರಿಗಳ ಗುಣಮಟ್ಟದ ಮೇಲೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸುವಂತಾಗಿದೆ.
ಇದೇ ಯೋಜನೆಯಡಿ ಹುಬ್ಬಳ್ಳಿಯ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಪೆವರ್ಸ್ಗಳನ್ನು ಹಾಕಿದ್ದು, ಅವು ಸಹ ಕಿತ್ತು ಹೋಗುತ್ತಿವೆ.
ಸ್ಮಾರ್ಟ್ ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ರಾತ್ರಿ ಸಮಯದಲ್ಲಿ ಡಾಲರ್ಸ್ ಕಾಲನಿಯ ಪ್ರಮುಖ ರಸ್ತೆಯಲ್ಲಿ ಓಡಾಡುವುದು ಕಷ್ಟಕರವಾಗಿದೆ. ಎಲ್ಲೆಡೆ ಗುಣಮಟ್ಟದ ವಿದ್ಯುತ್ ಕಂಬಗಳನ್ನು ಅಳವಡಿಸುವ ಜತೆಗೆ ಗುಣಮಟ್ಟದ ಕಾಮಗಾರಿ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ಸಿಟಿ ಕಂಪನಿ ಅಧಿಕಾರಿಗಳಿಗೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.