More

    ಕಚ್ಚಿದ ಹಾವನ್ನೇ ಜೀವಂತವಾಗಿ ಹಿಡಿದುಕೊಂಡು ಆಸ್ಪತ್ರೆಗೆ ಬಂದ ಭೂಪ! ತರೀಕೆರೆಯಲ್ಲಿ ಘಟನೆ

    ಚಿಕ್ಕಮಗಳೂರು: ಇಲ್ಲೊಬ್ಬ ಭೂಪ ತನ್ನನ್ನು ಕಚ್ಚಿದ ಹಾವನ್ನೇ ಹಿಡಿದುಕೊಂಡು ಆಸ್ಪತ್ರೆಗೆ ಬಂದ ಘಟನೆ ತರೀಕೆರೆ ತಾಲೂಕಿನಲ್ಲಿ ಸಂಭವಿಸಿದೆ.

    ಕೊಲ್ಕತ್ತಾ ಮೂಲದ ಆಸೀಫ್ ಹಾವಿನ ಸಮೇತ ಆಸ್ಪತ್ರೆಗೆ ಬಂದ ವ್ಯಕ್ತಿ. ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆಂದು ಬಂದಿದ್ದ ಆಸೀಫ್, ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ತೆರಳಿದ್ದ. ಈ ವೇಳೆ ಆಸೀಫ್​ಗೆ ಹಾವು ಕಚ್ಚಿದೆ. ಚಿಕಿತ್ಸೆ ಪಡೆಯಲು ಅನುಕೂಲವಾಗಲೆಂದು ಹಾಗೂ ತನಗೆ ಕಚ್ಚಿದ ಯಾವು ಯಾವುದೆಂದು ವೈದ್ಯರಿಗೆ ಗೊತ್ತಾಗಲೆಂದು ಆ ಹಾವನ್ನೇ ಕೈಯಲ್ಲಿ ಹಿಡಿದುಕೊಂದು ನೇರವಾಗಿ ಆಸ್ಪತ್ರೆಗೆ ತೆರಳಿದ್ದಾನೆ.

    ಆಸೀಫ್​ನ ಕೈಯಲ್ಲಿದ್ದ ಜೀವಂತ ಕೊಳಕುಮಂಡಳ ಹಾವನ್ನ ಕಂಡು ಆಸ್ಪತ್ರೆ ಸಿಬ್ಬಂದಿ ಅರೆಕ್ಷಣ ಭಯಗೊಂಡಿದ್ದಾರೆ. ಹಾವು ಕಚ್ಚಿದ್ದಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದಾನೆ ಎಂಬ ಸುದ್ದಿ ಕೇಳಿ ನಿಟ್ಟುಸಿರುಬಿಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಆಸೀಫ್​ಗೆ ಚಿಕಿತ್ಸೆ ನೀಡಲಾಗಿದೆ.

    ಬೆಂಗ್ಳೂರಲ್ಲಿ ಕಿಡ್ನ್ಯಾಪ್​, ಚಿಕ್ಕಬಳ್ಳಾಪುರದಲ್ಲಿ ಕೊಲೆ, ಚಾರ್ಮಾಡಿಘಾಟ್​ನಲ್ಲಿ ಶವ! ಕರವೇ ಅಧ್ಯಕ್ಷ ಸೇರಿ ಐವರ ಬಂಧನ, 9 ತಿಂಗಳ ಬಳಿಕ ರಹಸ್ಯ ಬಯಲಾಗಿದ್ದೇ ರೋಚಕ

    ಗೋವಾಕ್ಕೆ ಹೋಗಿ ಮೋಜು-ಮಸ್ತಿ ಮಾಡೋಣ… ಪ್ರೇಯಸಿಯ ಆಸೆ ಈಡೇರಿಸಲು ಅಣ್ಣನ ಮನೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ತಮ್ಮ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts