ಜಾತಿ ಜನಗಣತಿ ಸಿಎಂಗೆ ನ್ಯಾಯ ಕೊಡಿಸುವ ಇಚ್ಛಾಶಕ್ತಿ ಇಲ್ಲ

blank

ಕಲಬುರಗಿ: ಮುಖ್ಯಮಂತ್ರಿಗೆ ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಿಸುವ ಇಚ್ಛಾಶಕ್ತಿ ಇಲ್ಲ. 220 ದಿನಗಳಲ್ಲಿ ಅಧಿಕಾರ ತ್ಯಾಗ ಮಾಡುವ ವೇಳೆ ಜಾತಿ ಗಣತಿ ವರದಿಯ ಗೊಂದಲ ಸೃಷ್ಟಿಸಿದ್ದಾರೆ. ಗುರುವಾರ ಜಾತಿ ಗಣತಿ ವರದಿ ಚರ್ಚೆಗೆ ವಿಶೇಷ ಸಂಪುಟ ಸಭೆ ಯಾಕೆ ಮಾಡಿದರು? ಹತ್ತಾರು ಸಂಪುಟ ಸಭೆ ನಡೆದರೂ ಏನು ಆಗುವುದಿಲ್ಲ. ಮಾಡುವ ಇಚ್ಛಾಶಕ್ತಿ ಸಿಎಂಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂಗೆ ಓಬಿಸಿ, ದಲಿತ ಸೇರಿ ಯಾರಿಗೂ ನ್ಯಾಯ ಕೊಡುವುದು ಇಷ್ಟವಿಲ್ಲ. 10 ವರ್ಷಕ್ಕೊಮ್ಮೆ ಜಾತಿಗಣತಿ ಆಗಬೇಕು. ಬೇರೆ ಬೇರೆ ಸಮುದಾಯದವರಿಗೆ ಅನ್ಯಾಯ ಆಗಿದೆ. ಹಿಂದೆ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ವೀರಶೈವ ಲಿಂಗಾಯತರ ಮಧ್ಯೆ ಬೆಂಕಿ ಹಚ್ಚಿದ್ದರು. ಇದೀಗ ಪುನ@ ಅಧಿಕಾರದಿಂದ ಕೆಳಗಿಳಿಯುವ ವೇಳೆ ಸಮುದಾಯಗಳ ಮಧ್ಯೆ ಜಗಳ ಹಚ್ಚಲು ಜಾತಿ ಗಣತಿ ವರದಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಎಲ್ಲರ ಮುಖ್ಯಮಂತ್ರಿ ಇದ್ದಾರೋ ಅಥವಾ ಮುಸ್ಲಿಮರ ಮುಖ್ಯಮಂತ್ರಿ ಇದ್ದಾರೋ ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಗ್ಯಾರಂಟಿ ನೀಡಿದ್ದೇವೆ ಎಲ್ಲರೂ ಸುಖವಾಗಿ ಇದ್ದಾರೆ ಎಂಬ ಕುರುಡು ಭ್ರಮೆಯಲ್ಲಿ ಸಿಎಂ ಇದ್ದಾರೆ. ಆದರೆ, ಜನತೆ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುತ್ತಿದ್ದಾರೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಅದರ ಎರಡರಷ್ಟು ಕಿತ್ತುಕೊಳ್ಳುವ ಕೆಲಸ ಕಾಂಗ್ರೆಸ್​ ಸರ್ಕಾರ ಮಾಡುತ್ತಿದೆ. ಸರ್ಕಾರ ರೈತರ ಸಮಸ್ಯೆ ಆಲಿಸುತ್ತಿಲ್ಲ, ಹಿಂದೂಗಳ ಅಪಮಾನ ಮಾಡುವ ಮೂಲಕ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂದರು.
ಪರಿಷತ್​ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ್​, ಎಂಎಲ್ಸಿ ರವಿಕುಮಾರ ಇತರರಿದ್ದರು.

blank
Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…