ಬೆಂಗಳೂರು: ಇತ್ತೀಚೆಗಷ್ಟೇ ತೆಲಗು ಚಿತ್ರರಂಗದ ಹಿರಿಯ ನಟ ವಿಜಯ್ ರಂಗರಾಜು, ಸಾಹಸಿಂಹ ವಿಷ್ಣುವರ್ಧನ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಕನ್ನಡಿಗರು ಹಾಗೂ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿ ಕ್ಷಮೆಯಾಚಿಸಿದರು.
ವಿಷ್ಣುಗೆ ತೆಲುಗು ನಟ ಮಾಡಿದ ಅಪಮಾನ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ವಿಷ್ಣು ಅಭಿಮಾನಿಗಳ ಮನ ನೋಯಿಸುವ ಮತ್ತೊಂದು ಘಟನೆ ನಡೆದಿದೆ.
ಇದನ್ನೂ ಓದಿ: 2021ಕ್ಕೆ ಕೆಲ ಫೋನ್ನಲ್ಲಿ ವಾಟ್ಸ್ಆ್ಯಪ್ ಇರಲ್ಲ!
ಮಾಗಡಿರಸ್ತೆಯ ಟೋಲ್ಗೇಟ್ ಬಳಿಯಿರುವ ಡಾ. ವಿಷ್ಣುವರ್ದನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ ವಿಕೃತಿ ಮೆರೆದಿದ್ದಾರೆ. ಎರಡನೇ ಭಾರೀ ಇಂಥ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಪ್ರತಮೆಯನ್ನೇ ಎತ್ತೊಯ್ದಿದ್ದರಂತೆ.
ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಾರ್ವಜನಿಕರ ಹಾಗೂ ವಿಷ್ಣು ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್)
ಇದನ್ನೂ ಓದಿ: ಕುತಂತ್ರ ನಂಬದಿರಿ: ಅನ್ನದಾತರಿಗಾಗಿ ವಿಪಕ್ಷ ಏನನ್ನೂ ಮಾಡಿಲ್ಲ; ವಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ
ಶೂಟಿಂಗ್ ಬಿಡುವಿನ ವೇಳೆ ಸ್ನಾನಕ್ಕೆಂದು ಹೋದ ಮಲಯಾಳಂ ಖ್ಯಾತ ನಟ ದುರಂತ ಸಾವು!