ವಿವಾಹ ವಾರ್ಷಿಕೋತ್ಸವ ದಿನವೇ ಪೋಷಕರನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಪುತ್ರ! ಆತ ಕೊಟ್ಟ ಕಾರಣ ಕೇಳಿದ್ರೆ… | Son Stabs

blank

ನವದೆಹಲಿ: ಒಂದೇ ಕುಟುಂಬದ ಮೂವರನ್ನು ಕೊಲೆ ಪ್ರಕರಣಕ್ಕೆ ಇದೀಗ ಶಾಕಿಂಗ್​ ಟ್ವಿಸ್ಟ್‌ ಸಿಕ್ಕಿದ್ದು, ಹತ್ಯೆಗೈದ ಆರೋಪಿ ಬೇರಾರೂ ಅಲ್ಲ ಮೃತ ದಂಪತಿಯ ಮಗ ಎಂಬುದು ಪೊಲೀಸರಿಗೆ ಸ್ಪಷ್ಟವಾಗಿದೆ. ಕೊಲೆಗೈದ ವ್ಯಕ್ತಿಯನ್ನು ಅರ್ಜುನ್ ಎಂದು ಹೇಳಲಾಗಿದ್ದು, ಈತ ಮೃತ ದಂಪತಿಯ ಮಗ ಎಂದು ಪೊಲೀಸರ ವರದಿಯಲ್ಲಿ ಉಲ್ಲೇಖವಾಗಿದೆ. ಬುಧವಾರ 6:30ರ ಸುಮಾರಿಗೆ ಬೆಳಗ್ಗೆ ವಾಕಿಂಗ್ ಮುಗಿಸಿ ಹಿಂತಿರುಗಿದ ಪೋಷಕರು ನಂತರ ಪತ್ತೆಯಾಗಿದ್ದು ಶವವಾಗಿ ಎಂದು ಹೇಳಿದ್ದ ಅರ್ಜುನ್ (Son Stabs),​ ಈಗ ಆರೋಪಿಯಾಗಿ ಪೊಲೀಸರ ಮುಂದೆ ಕುಳಿತಿದ್ದಾನೆ.

ಇದನ್ಣೂ ಓದಿ: ಮುಡಾ ಹಗರಣ: ಹೈಕೋರ್ಟ್​ ಏಕಸದಸ್ಯ ಪೀಠ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದ ವಿಭಾಗೀಯ ಪೀಠ

ಶುಭ ದಿನವೇ ಅಶುಭ

ತನ್ನ ತಂದೆ-ತಾಯಿ ಮತ್ತು ತಂಗಿ ಕೊಲೆಯಾಗಿದ್ದಾರೆ ಎಂದು ಅಕ್ಕ-ಪಕ್ಕದ ಮನೆಯವರಿಗೆ ಹೇಳಿ, ತಾನು ಅಮಾಯಕನಂತೆ ವರ್ತಿಸಿದ್ದ ಅರ್ಜುನ್​, ಈ ಕ್ರೂರ ಹತ್ಯೆಯ ಮಾಸ್ಟರ್ ಮೈಂಡ್ ತಾನೇ ಎಂಬುದನ್ನು ಇದೀಗ ದೆಹಲಿ ಪೊಲೀಸರು ತನಿಖೆಯಲ್ಲಿ ಬಾಯ್ಬಿಡಿಸಿದ್ದಾರೆ. ನಿವೃತ್ತ ಸೇನಾ ಅಧಿಕಾರಿ ರಾಜೇಶ್ ಕುಮಾರ್ (51) ಮತ್ತು ಅವರ ಪತ್ನಿ ಕೋಮಲ್ (46) ತಮ್ಮ 27ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ದಿನವೇ ಈ ಹತ್ಯೆ ಸಂಭವಿಸಿದೆ. ದಂಪತಿಗಳು ತಮ್ಮ ಪುತ್ರಿ ಕವಿತಾ (23) ಜತೆಗೆ ದಕ್ಷಿಣ ದೆಹಲಿಯ ಡಿಯೋಲಿ ಗ್ರಾಮದ ತಮ್ಮ ನಿವಾಸದಲ್ಲಿ ಚಾಕು ಇರಿತಕ್ಕೆ ಬಲಿಯಾಗಿದ್ದಾರೆ.

ಕೊಲೆಗೆ ಇದೇ ಕಾರಣ

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯಾಗಿರುವ ಅರ್ಜುನ್, ತನ್ನ ಹೆತ್ತ ತಂದೆ-ತಾಯಿ ಮತ್ತು ಸಹೋದರಿಯನ್ನು ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ನೆರೆಹೊರೆಯವರಿಗೆ ಈ ಬಗ್ಗೆ ಮಾಹಿತಿ ನೀಡಿ, ನನ್ನ ಕುಟುಂಬದವರನ್ನು ಯಾರೋ ಕೊಲೆ ಮಾಡಿಬಿಟ್ಟಿದ್ದಾರೆ ಎಂದು ನಾಟಕವಾಡಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಬಂದ ಪೊಲೀಸರಿಗೆ ಅರ್ಜುನ್​ ನಡೆ-ನುಡಿಯಲ್ಲಿ ಗೊಂದಲವಿರುವುದು ಗೊತ್ತಾಗಿದೆ. ಈ ಹಿನ್ನಲೆ ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ನಿರಂತರ ವಿಚಾರಣೆಯಲ್ಲಿ ಕಡೆಗೂ ತನ್ನ ತಪ್ಪೊಪ್ಪಿಕೊಂಡ ಆರೋಪಿ, ತಂದೆ-ತಾಯಿ ಮತ್ತು ತಂಗಿ ಜೊತೆಗಿನ ಸಂಬಂಧ ಹಳಸಿದ ಕಾರಣದಿಂದ ಬೇಸತ್ತು ಕೊಲೆ ಮಾಡಿದೆ ಎಂದು ಹೇಳಿದ್ದಾನೆ,(ಏಜೆನ್ಸೀಸ್).

ಬಲವಂತದ ಮದುವೆ, ಐಟಂ ಸಾಂಗ್​ಗಳಿಂದಲೇ ಜೀವನ​; ‘ಸಿಲ್ಕ್’​ ಆಗಿ ಮಿಂಚಿದ ಸ್ಮಿತಾ ಪಟ್ಟ ಕಷ್ಟ ಅಷ್ಟಿಷ್ಟಲ್ಲ!

Share This Article

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…