ನವದೆಹಲಿ: ಇತ್ತೀಚೆಗಷ್ಟೇ ಕಾಂಗ್ರೆಸ್ ಲೋಕಸಭಾ ಸದಸ್ಯರ ಸಭೆ ನಡೆಸಿದ್ದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಜುಲೈ 30 (ನಾಳೆ)ರಂದು ರಾಜ್ಯಸಭೆಯ ಕಾಂಗ್ರೆಸ್ ಎಂಪಿಗಳ ಸಭೆಯನ್ನು ಕರೆದಿದ್ದಾರೆ. ಪ್ರಸಕ್ತ ದೇಶದ ಕೊವಿಡ್-19 ಪರಿಸ್ಥಿತಿಯನ್ನು ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಈ ಹಿಂದೆ ಲೋಕಸಭಾ ಸದಸ್ಯರ ಸಭೆ ಕರೆದಾಗ ಅಲ್ಲಿ ಮತ್ತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷನ ಸ್ಥಾನಕ್ಕೆ ಏರಬೇಕು ಎಂಬುದೇ ಬಹುಮುಖ್ಯ ಚರ್ಚೆಯಾಗಿತ್ತು. ಇದನ್ನೂ ಓದಿ: ವಿಶ್ವಕಪ್ ಗೆದ್ದ ಬಳಿಕ ದಿಗ್ಗಜ ಸಚಿನ್ರನ್ನು ಹೆಗಲ ಮೇಲೆ ಹೊತ್ತು ಮೈದಾನ ಸುತ್ತಿದ್ದೇಕೆ..?
ಇತ್ತೀಚೆಗೆ ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ಹೆಚ್ಚಾಗಿ ಕಿಡಿಕಾರುತ್ತಿದ್ದು, ಸೋಮವಾರ ಎಲ್ಲ ರಾಜ್ಯಗಳಲ್ಲೂ ಬಿಜೆಪಿ ವಿರುದ್ಧ ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಹಾಗೇ ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಭಿನ್ನಮತ ಎದ್ದಿದೆ. ಈ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಡೆಸಲಿರುವ ವರ್ಚ್ಯುವಲ್ ಮೀಟಿಂಗ್ ಇನ್ನಷ್ಟು ಕುತೂಹಲ ಮೂಡಿಸಿದೆ.(ಏಜೆನ್ಸೀಸ್)