ಅಂದು ಸೋನಿಯಾ ಗಾಂಧಿ ಇಲ್ಲದಿದ್ದರೆ ತೆಲಂಗಾಣ ರಾಜ್ಯ ರಚನೆಯಾಗುತ್ತಿರಲಿಲ್ಲ: ರಾಹುಲ್ ಗಾಂಧಿ

ಹೈದರಾಬಾದ್: ತೆಲಂಗಾಣ ರಾಜ್ಯ ರಚನೆಯಾಗಲು ಸೋನಿಯಾ ಗಾಂಧಿ ಅವರೇ ಕಾರಣ, ಅವರಿರಲಿಲ್ಲದಿದ್ದರೆ ಇಂದು ತೆಲಂಗಾಣ ರಚನೆಯಾಗುತ್ತಿರಲಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದ ಆರ್ಮೂರ್​ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್​ ಆಡಳಿತರೂಢ ಬಿಆರ್​ಎಸ್​ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ತೆಲಂಗಾಣ ರಾಜ್ಯ ರಚನೆ ಮಾಡಲು ಸೋನಿಯಾ ಗಾಂಧಿ ಅವರು ನಿಮಗೆ ಸಹಾಯ ಮಾಡಿದ್ದಾರೆ. ಅಂದು ಸೋನಿಯಾ ಗಾಂಧಿ ಅವರು ಸಹಾಯ ಮಾಡಿರದಿದ್ದರೆ ಇಂದು ತೆಲಂಗಾಣ ಪ್ರತ್ಯೇಕ ರಾಜ್ಯವಾಗಲು ಸಾಧ್ಯವಾಗುತ್ತಿರಲಿಲ್ಲ. … Continue reading ಅಂದು ಸೋನಿಯಾ ಗಾಂಧಿ ಇಲ್ಲದಿದ್ದರೆ ತೆಲಂಗಾಣ ರಾಜ್ಯ ರಚನೆಯಾಗುತ್ತಿರಲಿಲ್ಲ: ರಾಹುಲ್ ಗಾಂಧಿ