More

    ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದಲೇ ನಡೆದಿದೆ ಜೆಎನ್​ಯು ಹಿಂಸಾಚಾರ: ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ

    ನವದೆಹಲಿ: ಜೆಎನ್​ಯು ವಿದ್ಯಾರ್ಥಿಗಳ ಮೇಲೆ ಭಾನುವಾರ ಮುಸುಕುಧಾರಿಗಳು ನಡೆಸಿದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್​ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ವಿದ್ಯಾರ್ಥಿಗಳ ಮೇಲೆ ಹಿಂದೆಂದೂ ಕಂಡಿರದ ರೀತಿಯ ಭಯಾನಕ ದಾಳಿಯಾಗಿದೆ ಎಂದು ಹೇಳಿರುವ ಸೋನಿಯಾ ಗಾಂಧಿ, ದೇಶದಲ್ಲಿ ಕಾಲೇಜುಗಳ ಕ್ಯಾಂಪಸ್​​ಗಳಲ್ಲಿ ಪ್ರತಿದಿನ ಒಂದಲ್ಲ ಒಂದು ಗಲಾಟೆ ನಡೆಯುತ್ತಿದೆ. ಒಂದೋ ಪೊಲೀಸರು ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡುತ್ತಾರೆ. ಇಲ್ಲವೇ ಇಂತಹ ದುಷ್ಕರ್ಮಿಗಳು ದಾಳಿ ಮಾಡುತ್ತಾರೆ. ಇವರೆಲ್ಲರಿಗೂ ಬಿಜೆಪಿ ಸರ್ಕಾರದ ಬೆಂಬಲವಿದೆ ಎಂದು ಹರಿಹಾಯ್ದಿದ್ದಾರೆ.

    ಈ ದೇಶದ ಯುವಜನರು, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಮೋದಿ ಸರ್ಕಾರದ ಕುಮ್ಮಕ್ಕಿನಿಂದ ದಾಳಿ ಮಾಡುತ್ತಿರುವ ಸಕ್ರಿಯ ಗೂಂಡಾಗಳ ವರ್ತನೆಯನ್ನು ಯಾವ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

    ಜೆಎನ್​ಯು ವಿಶ್ವವಿದ್ಯಾಲಯಕ್ಕೆ ನುಗ್ಗಿದ ಗುಂಪೊಂದು ನಿನ್ನೆ ಅಲ್ಲಿನ ವಿದ್ಯಾರ್ಥಿಗಳು, ಉಪನ್ಯಾಸಕ ಮೇಲೆ ಹಲ್ಲೆ ನಡೆಸಿತ್ತು. ಗಾಯಗೊಂಡ ಸುಮಾರು 34 ಜನರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts