More

    ಹೆತ್ತ ತಂದೆ ತಾಯಿಯನ್ನೇ ಬರ್ಬರವಾಗಿ ಕೊಲೆಗೈದ ಪಾಪಿ ಮಗ!

    ಬೆಂಗಳೂರು: ಆಘಾತಕಾರಿ ಘಟಣೆಯೊಂದರಲ್ಲಿ ಹೆತ್ತ ಮಗನೇ ತಂದೆ-ತಾಯಿಯನ್ನು ರಾಡ್​ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಕೊಡಿಗೇಹಳ್ಳಿಯಲ್ಲಿ ನಡೆದಿದೆ.

    ಮೃತ ದಂಪತಿಯನ್ನು ಭಾಸ್ಕರ್​ ಮತ್ತು ಶಾಂತಮ್ಮ ಎಂದು ಗುರುತಿಸಲಾಗಿದ್ದು, ಇವರ ಮಗ ಶರತ್​(26) ಕೊಲೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿ ಹುಡುಕಾಟದಲ್ಲಿ ನಿರತರಾಗಿದ್ದಾರೆ.

    ಶಾಂತಮ್ಮ ಭಾಸ್ಕರ್​ ದಂಪತಿಗೆ ಇಬ್ಬರು ಮಕ್ಕಳಿದ್ದು ಹಿರಿಯ ಪುತ್ರ ತಿಂಡ್ಲುವಿನಲ್ಲಿ ವಾಸವಿದ್ದಾರೆ. ಕಿರಿಯ ಮಗ ಶರತ್​ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇರುತ್ತಿದ್ದ. ಕೊಲೆಯಾದ ಶಾಂತಮ್ಮ ಕೇಂದ್ರ ಸರ್ಕಾರದ ನೌಕರರಾಗಿದ್ದು, ಕೆಲ ದಿನಗಳ ಹಿಂದೆ ನಿವೃತ್ತರಾಗಿದ್ದರು. ಇವರ ಪತಿ ಭಾಸ್ಕರ್​ ಕ್ಯಾಂಟೀನ್​ ಒಂದರಲ್ಲಿ ಕ್ಯಾಶಿಯರ್​ ಆಗಿ ಕಾರ್ಯನಿರ್ವಹಿಸುತ್ತಿದ್ದರು.

    Double Murder

    ಆರೋಪಿ ಶರತ್​ ಆಗಾಗ ಸೈಕೋ ರೀತಿ ವರ್ತಿಸುತ್ತಿದ್ದ ಎಂದು ಸ್ಥಳೀಯರು ಹೇಳಿದ್ದು, ಕುಡಿದು ಗಲಾಟೆ ಮಾಡುತ್ತಿದ್ದ. ಭಾನುವಾರ ಸಂಜೆಯೂ ಸಹ ಕುಡಿದು ಗಲಾಟೆ ಮಾಡಿದ್ದು, ಈ ವೇಳೆ ತಂದೆ-ತಾಯಿಯ ಮೇಲೆ ರಾಡ್​ನಿಂದ ಹಲ್ಲೆ ನಡೆಸಿ ಮನೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ.

    ಇದನ್ನೂ ಓದಿ: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕುವಿನಿಂದ ಇರಿದ ತಂದೆ

    ತೀವ್ರವಾಗಿ ಗಾಯಗೊಂಡಿದ್ದ ಶಾಂತಮ್ಮ ಹಾಗೂ ಭಾಸ್ಕರ್​ ದಂಪತಿ ಮನೆಯಲ್ಲೇ ಕೊನೆಯುಸಿರೆಳೆದಿದ್ದು, ಮೃತರ ಹಿರಿಯ ಪುತ್ರ ತಮ್ಮ ತಂದೆ ತಾಯಿಗೆ ಅನೇಕ ಬಾರಿ ಕರೆ ಮಾಡಿದರು ಸ್ವೀಕರಿಸದಿದ್ದಾಗ ಅನುಮಾನಗೊಂಡು ಪಕ್ಕದ ಮನೆಯವರಿಗೆ ತಿಳಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

    ಘಟನಾ ಸ್ಥಳ ಪರಿಶೀಲಿಸಿ ಮಾತನಾಡಿದ ಡಿಸಿಪಿ ಲಕ್ಷ್ಮಿ ಪ್ರಸಾದ್​ ಕೊಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಂದೆ ತಾಯಿ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಈ ಸಂಬಂಧ ಮೊದಲ ಮಗನಿಂದ ದೂರು ನೀಡಲಾಗಿದೆ. ಎರಡನೇ ಮಗ ಶರತ್​ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದ್ದು, ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts