ಬೆಂಗಳೂರು: ಖ್ಯಾತ ಉದ್ಯಮಿ, ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ನಿಧನ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ಸ್ಯಾಂಡಲ್ವುಡ್ನ ಖ್ಯಾತನಾಮರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಜಗದೀಶ್ ಅವರ ಸಾವು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದ್ದು, ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
ಇತ್ತ ಸೌಂದರ್ಯ ಜಗದೀಶ್ ಅವರ ನಿಧನದ ಕುರಿತು ಅವರ ಗೆಳೆಯ ಶ್ರೇಯಸ್ ಪ್ರತಿಕ್ರಿಯಿಸಿದ್ದು, ಹುಟ್ಟಿಕೊಂಡಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಂತೆ-ಕಂತೆಗಳಿಗೆ ಅವರು ಪುರ್ಣವಿರಾಮ ಹಾಕಿದ್ದಾರೆ.
ಇದನ್ನೂ ಓದಿ: ಶೂಟಿಂಗ್ ವೇಳೆ ಕಂಟೆಂಟ್ ವಿಚಾರವಾಗಿ ಗಲಾಟೆ; ಭೀಕರವಾಗಿ ಪ್ರಾಣಬಿಟ್ಟ ಪ್ರೇಮಿಗಳು
ಈ ಕುರಿತು ಮಾತನಾಡಿರುವ ಶ್ರೇಯಸ್, ಆರ್ಥಿಕ ಸಂಕಷ್ಟದಿಂದ ಸೌಂದರ್ಯ ಜಗದೀಶ್ ಅವರು ಬಳಲುತ್ತಿದ್ದರು ಕಳೆದ ಕೆಲ ದಿನಗಳ ಹಿಂದೆ ಬ್ಯಾಂಕ್ನವರು ನೋಟಿಸ್ ಕೊಟ್ಟಿದ್ದರು ಇದಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಬ್ಯಾಂಕ್ ನೋಟಿಸ್ಗೂ ಅವರ ಸಾವಿಗೂ ಯಾವುದೇ ಸಂಬಂಧವಿಲ್ಲ. ನೋಟಿಸ್ ಇತ್ಯಾದಿ ಎಲ್ಲ ಸುಮಾರು ದಿನದಿಂದ ಇರುವಂಥದ್ದು. ಬಿಸ್ನಿಸ್ ಬೇರೆ, ಇದು ಬೇರೆ. ಅವರೆಡಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಸೌಂದರ್ಯ ಜಗದೀಶ್ ಅವರಿಗೆ ಹೃದಯಾಘಾತ ಆಗಿರಬಹುದಾ ಅಥವಾ ಏನಾದರೂ ಆರೋಗ್ಯ ಸಮಸ್ಯೆ ಇದ್ದರಬಹುದಾ ಎಂಬ ಶಂಕೆ ಸಹ ವ್ಯಕ್ತವಾಗಿದೆ. ಅವರಿಗೆ ಹೃದಯಾಘಾತವಾಗಿಲ್ಲ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿ ತಿಳಿದ ಕೂಡಲೇ ನಾವು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಜಗದೀಶ್ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಕಾರಣ ಏನು ಎಂಬುದನ್ನು ನಾವು ಸಡನ್ ಆಗಿ ಹೇಳೋಕೆ ಆಗಲ್ಲ. ಹೃದಯಾಘಾತ ಆಗಿದೆ ಎಂಬುದೆಲ್ಲಾ ಸುಳ್ಳು ಸುದ್ದಿ. ಸಾಮಾಜಿಕ ಜಾಲತಾಣಗಳಲ್ಲಿ ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಸೌಂದರ್ಯ ಜಗದೀಶ್ ಅವರ ಸ್ನೇಹಿತ ಶ್ರೇಯಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.