ಚೆನ್ನೈ: ಕೆಲ ತಿಂಗಳುಗಳ ಹಿಂದೆ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಹಿರಿಯ ಪುತ್ರಿ ಐಶ್ವರ್ಯಾ ರಜನಿಕಾಂತ್, ತಮ್ಮ ಮನೆಯಲ್ಲಿ ಕಳ್ಳತನವಾಗಿದೆ ಎಂದು ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸುಮಾರು 60 ಸವರನ್ ಚಿನ್ನವನ್ನು ಐಶ್ವರ್ಯಾ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮನೆಯ ಕೆಲಸದವಳಾದ ಈಶ್ವರಿ ಎಂಬಾಕೆಯನ್ನು ಬಂಧಿಸಲಾಗಿತ್ತು. ಈ ಪ್ರಕರಣ ಭಾರೀ ಸುದ್ದಿಯಾಗಿತ್ತು.
ಇದೀಗ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ರಜಿನಿಕಾಂತ್ ಕೂಡ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಏಪ್ರಿಲ್ 23ರಂದು ನನ್ನ ಮನೆಯಿಂದ ತೆನಾಂಪೇಟೆಯಲ್ಲಿನ ಕಾಲೇಜಿಗೆ ರೇಂಜ್ ರೋವರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದೆ. ಈ ವೇಳೆ ನನ್ನ ಪೌಚ್ನಲ್ಲಿ ಇಟ್ಟಿದ್ದ ಐಷಾರಾಮಿ ಕಾರಿನ ಹೆಚ್ಚುವರಿ ಕೀ ಕಳೆದು ಹೋಗಿದೆ. ಹುಡುಕಿ ಕೊಡಿ ಎಂದು ಠಾಣೆಯಲ್ಲಿ ಪೊಲೀಸರ ನೆರವು ಕೋರಿದ್ದರು. ಈ ಸಂಬಂಧ ಪೊಲೀಸರು ಪ್ರಕರಣ ಸಹ ದಾಖಲಿಸಿಕೊಂಡಿದ್ದು, ಕೀಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಇನ್ನು ರಜಿನಿಕಾಂತ್ ಅವರ ಸಿನಿಮಾ ವಿಚಾರಕ್ಕೆ ಬಂದರೆ, ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಮತ್ತು ಸನ್ ಪಿಕ್ಚರ್ಸ್ ನಿರ್ಮಾಣದ ಜೈಲರ್ ಸಿನಿಮಾದಲ್ಲಿ ನಟಸಿದ್ದಾರೆ. ಈ ಸಿನಿಮಾ ಆಗಸ್ಟ್ 10ರಂದು ವಿಶ್ವದಾದ್ಯಾಂತ ಬಿಡುಗಡೆಯಾಗಲಿದೆ. ಇನ್ನೊಂದೆಡೆ ತಮ್ಮ ಮಗಳು ಐಶ್ವರ್ಯಾ ರಜನಿಕಾಂತ್ ನಿರ್ದೇಶನದ ಲಾಲ್ ಸಲಾಂ ಸಿನಿಮಾದಲ್ಲಿ ರಜಿನಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. (ಏಜೆನ್ಸೀಸ್)
ಫಲಿತಾಂಶಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದ ಸೋಲೊಪ್ಪಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ!
ನನಗೆ ಬೆಡ್ ಮೇಲೆ ರೋಶನ್ ಬೇಕು! ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ ಮೆಗಾಸ್ಟಾರ್ ಪುತ್ರಿಯ ಹೇಳಿಕೆ