ಬೆಂಗಳೂರು: ತಮಿಳುನಾಡಿನ ಈರೋಡ್ನಲ್ಲಿ ನಡೆಯುತ್ತಿರುವ ದಕ್ಷಿಣ ಭಾರತ ಹಿರಿಯರ ಕುಸ್ತಿ ಪ್ರೀಸ್ಟೈಲ್ ಪುರುಷರ ವಿಭಾಗದ ನ್ಯಾಷನಲ್ ಚಾಂಪಿಯನ್ಷಿಪ್ ಸ್ಪರ್ಧೆಯ ಪುರುಷರ ವಿಭಾಗದ ನ್ಯಾಷನಲ್ ಚಾಂಪಿಯನ್ಷಿಪ್ನಲ್ಲಿ ರಾಜ್ಯದ ಕುಸ್ತಿಪಟುಗಳು ಸಮಗ್ರ ಚಾಂಪಿಯನ್ಷಿಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಟೂರ್ನಿಯಲ್ಲಿ ರಾಜ್ಯ 8 ಚಿನ್ನ, 2 ಬೆಳ್ಳಿ ಸೇರಿ 10 ಪದಕ ಜಯಿಸಿದೆ.
ಈ ವಿಜೇತರಿಗೆ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಪ್ರಶಸ್ತಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಭಾರತ ಕುಸ್ತಿ ಸಂಘದ ಕಾರ್ಯದರ್ಶಿ ವಿ.ಎನ್ ಪ್ರಸೂದ್, ಜಂಟಿ ಕಾರ್ಯದರ್ಶಿ ಲೋಗನಾದನ್, ಕರ್ನಾಟಕ ಕುಸ್ತಿ ಸಂಘದ ಕಾರ್ಯದರ್ಶಿ ಜೆ.ಶ್ರೀನಿವಾಸ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಕೆ.ಕುಮಾರ್ ಹಾಗೂ ತಾಂತ್ರಿಕ ಸಮಿತಿಯ ಮುಖ್ಯಸ್ಥ ವಿನೋದ್ ಕುಮಾರ್ ಉಪಸ್ಥಿತರಿದ್ದರು.