More

    ಮಳೆಯಿಂದ ಬಿತ್ತನೆ ಕಾರ್ಯಕ್ಕೆ ಅಡ್ಡಿ

    ಗುಂಡ್ಲುಪೇಟೆ: ಕಳೆದ ಕೆಲವು ದಿನಗಳಿಂದ ತಾಲೂಕಿಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಕಾರ್ಯಕ್ಕೆ ತೀವ್ರ ಅಡಚಣೆಯಾಗಿದೆ.


    ಯುಗಾದಿ ಹಬ್ಬದ ವೇಳೆ ಅಂದರೆ ಮಾರ್ಚ್ ಅಂತ್ಯದಲ್ಲಿ ಪೂರ್ವ ಮುಂಗಾರು ಮಳೆ ಬೀಳುವ ನಿರೀಕ್ಷೆಯಲ್ಲಿ ರೈತರು ಜಮೀನುಗಳಿಗೆ ಗೊಬ್ಬರ ಹೂಡಿ ಉಳುಮೆ ಮಾಡಿ, ಬಿತ್ತನೆಗೆ ಅಣಿಗೊಳಿಸಿಕೊಂಡು ಮಳೆಗಾಗಿ ಕಾದಿದ್ದರು. ಆದರೆ ಸಕಾಲದಲ್ಲಿ ಮಳೆ ಬೀಳದ ಕಾರಣ ಬಿತ್ತನೆ ಕಾರ್ಯ ವಿಳಂಬವಾಗಿತ್ತು.
    ಈಗ ಮೇ ಮೊದಲ ವಾರದಲ್ಲಿ ಅಲ್ಲಲ್ಲಿ ಬೀಳಲಾರಂಭಿಸಿದ್ದರಿಂದ ರೈತರು ಬಿತ್ತನೆ ಕಾರ್ಯಕ್ಕೆ ಅಣಿಯಾಗಿದ್ದರು. ಆದರೆ ಕಳೆದ ವಾರದಿಂದ ಎಡೆಬಿಡದೆ ಮಳೆ ಬೀಳುತ್ತಿರುವುದರಿಂದ ಸೂರ್ಯಕಾಂತಿ, ಜೋಳ, ಮುಸುಕಿನ ಜೋಳ ಹಾಗೂ ಅರಿಶಿಣವನ್ನು ನಾಟಿ ಮಾಡಲು ಅವಕಾಶ ನೀಡುತ್ತಿಲ್ಲ.


    ಇದರಿಂದ ತಾಲೂಕಿನಲ್ಲಿ ಕೇವಲ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಕೈಗೊಳ್ಳಲಾಗಿದೆ. 10,200 ಹೆಕ್ಟೇರ್ ಸೂರ್ಯಕಾಂತಿ, 4,800 ಹೆಕ್ಟೇರ್ ಜೋಳ, 600 ಹೆಕ್ಟೇರ್ ನೆಲಗಡಲೆ, 250 ಹೆಕ್ಟೇರ್ ಅಲಸಂದೆ, 100 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ, ಉದ್ದು, ಹೆಸರು ಬಿತ್ತನೆ ಮಾಡಲಾಗಿದ್ದು, ಇನ್ನೂ 12 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆ ಬಾಕಿ ಉಳಿದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts