ಲಖನೌ: ಉತ್ತರಪ್ರದೇಶದ ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಾರ್ಟಿ(ಎಸ್ಪಿ)ಯ ಅಧ್ಯಕ್ಷ ಅಖಿಲೇಶ್ ಯಾದವ್ 2022ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಜಮ್ಗಡದ ಸಂಸದರಾಗಿರುವ ಯಾದವ್ ಎಸ್ಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇಂದು ಲಖನೌನಲ್ಲಿ ಮಾತನಾಡಿರುವ ಅಖಿಲೇಶ್ ಯಾದವ್ ತಮ್ಮ ಪಕ್ಷ, ರಾಷ್ಟ್ರೀಯ ಲೋಕ ದಳ(ಆರ್ಎಲ್ಡಿ)ದೊಂದಿಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ. ಸೀಟುಗಳ ಹಂಚಿಕೆ ಇನ್ನೂ ಅಂತಿಮವಾಗಬೇಕಿದೆ ಎಂದು ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ. ತಮ್ಮ ಚಿಕ್ಕಪ್ಪ ಶಿವಪಾಲ್ ಯಾದವ್ರ ಪ್ರಗತಿಶೀಲ್ ಸಮಾಜವಾದಿ ಪಾರ್ಟಿ ಲೋಹಿಯಾ(ಪಿಎಸ್ಪಿಎಲ್)ದೊಂದಿಗೆ ಒಗ್ಗೂಡುವ ಸಾಧ್ಯತೆ ಬಗೆಗೆ, “ನನಗೆ ಯಾವ ಸಮಸ್ಯೆಯೂ ಇಲ್ಲ. ಅವರಿಗೆ ಮತ್ತು ಅವರ ಜನರಿಗೆ ಸೂಕ್ತ ಗೌರವ ನೀಡಲಾಗುವುದು” ಎಂದು ತೆರೆದ ಆಹ್ವಾನ ನೀಡಿದ್ದಾರೆ. (ಏಜೆನ್ಸೀಸ್)
ಬಿಜೆಪಿ ಜೊತೆ ಸೀಟು ಹಂಚಿಕೆಗೆ ಸಿದ್ಧ: ಕಾಂಗ್ರೆಸ್ ತೊರೆದ ಮಾಜಿ ಸಿಎಂ ಉವಾಚ