ಲಖನೌ: ಭಾರತೀಯ ಜನತಾ ಪಕ್ಷ(ಬಿಜೆಪಿ) ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಬದಲಿಗೆ ಬೆಲೆ ಏರಿಕೆಯನ್ನು ದುಪ್ಪಟ್ಟುಗೊಳಿಸಿದೆ ಎಂದು ಸಮಾಜವಾದಿ ಪಾರ್ಟಿ(ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯ ಮಾಡಿದ್ದಾರೆ.
ಚುನಾವಣೆಗೆ ಸಜ್ಜಾಗುತ್ತಿರುವ ಉತ್ತರಪ್ರದೇಶದ ಲಖನೌನಲ್ಲಿ ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, “ಬಿಜೆಪಿಯ ಕಮಲವು ಸುಳ್ಳು ಮತ್ತು ಮೋಸದ ಕೊಚ್ಚೆಯಲ್ಲಿ ಬೆಳೆಯುತ್ತದೆ” ಎಂದು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ‘ರೆಬೆಲ್’ ನಡೆಯಿಂದಾಗಿ ಬಿಜೆಪಿಯಲ್ಲಿ ‘ಏಕಾಂಗಿ’ಯಾದ ಮಾಜಿ ಶಾಸಕ ಸುರೇಶ್ಗೌಡ
ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯನ್ನು ಮರೆತುಬಿಟ್ಟಿದೆ ಎಂದ ಯಾದವ್, ರೈತರಿಗೆ ತಮ್ಮ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಲಖೀಂಪುರ್ನ ಮಂಡಿಯಲ್ಲಿ ಒಬ್ಬ ರೈತ ತನ್ನ ಭತ್ತದ ಬೆಳೆಯನ್ನು ಸುಟ್ಟುಹಾಕಿದ. ತಮಗೆ ಸಿಗಬೇಕಾದ ಬೆಲೆ ಸಿಗುತ್ತದಾ ಎಂದು ರೈತರು ತಿಳಿಯಬಯಸಿದ್ದಾರೆ. ಆದರೆ ಅವರಿಗೆ ಉತ್ತರ ಕೊಡುವವರು ಯಾರೂ ಇಲ್ಲ” ಎಂದರು.
ಮುಂಬೈ ಡ್ರಗ್ಸ್ ಕೇಸ್: ‘ನನ್ನನ್ನು ಟಾರ್ಗೆಟ್ ಮಾಡ್ತಿದಾರೆ, ಬೆದರಿಕೆ ಹಾಕ್ತಿದಾರೆ’ ಎಂದ ಎನ್ಸಿಬಿ ಅಧಿಕಾರಿ
ಪ್ರತಿ ಬಾರಿ ವಿಮಾನ ನಿಲ್ದಾಣದಲ್ಲಿ ಹಿಂಸೆ! ಪ್ರಧಾನಿ ಮೋದಿಗೆ ಹಿರಿಯ ನಟಿಯ ದೂರು