More

    ಜನಾರ್ದನ ರೆಡ್ಡಿಗೆ ಶಾಕ್​ ಕೊಟ್ಟ ನ್ಯಾಯಾಲಯ: ರೆಡ್ಡಿ ದಂಪತಿ ಒಡೆತನದ ಆಸ್ತಿಗಳ ಜಪ್ತಿಗೆ ಆದೇಶ

    ಬೆಂಗಳೂರು: ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಆದೇಶ ಹೊರಡಿಸುವ ಮೂಲಕ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಕ್​ ನೀಡಿದೆ.

    ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿಗೆ ನ್ಯಾಯಾಲಯ ಆಘಾತ ನೀಡಿದ್ದು, ರೆಡ್ಡಿ ದಂಪತಿ ಒಡೆತನದ 2009ರ ಜನವರಿ ನಂತರ ಖರೀದಿ ಮಾಡಿದ ಆಸ್ತಿಗಳನ್ನು ಜಪ್ತಿ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

    ಇದನ್ನೂ ಓದಿ: ಹೆತ್ತ ತಾಯಿ ಕೊಂದು ಸೂಟ್​ಕೇಸ್​ನಲ್ಲಿ ಶವಹೊತ್ತು ಪೊಲೀಸ್​ ಠಾಣೆಗೆ ಬಂದ ಮಗಳು!

    ಅರುಣಾ ಲಕ್ಷ್ಮೀ ಹೆಸರಲ್ಲಿ 75ಕ್ಕೂ ಅಧಿಕ ಆಸ್ತಿಗಳಿವೆ. ಬೆಂಗಳೂರು, ಬಳ್ಳಾರಿ ಹಾಗೂ ಆಂಧ್ರದಲ್ಲಿ ರೆಡ್ಡಿ ದಂಪತಿ ಆಸ್ತಿ ಮಾಡಿದ್ದಾರೆ. ಇದೀಗ ರೆಡ್ಡಿ ದಂಪತಿ ಒಡೆತನದ ನೂರಕ್ಕೂ ಅಧಿಕ ಆಸ್ತಿಗಳನ್ನು ಜಪ್ತಿ ಮಾಡುವಂತೆ ನ್ಯಾಯಾಧೀಶ ಜಯಂತ್​ ಕುಮಾರ್ ಅವರು ಆದೇಶ ಮಾಡಿದ್ದಾರೆ.

    ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳಿವೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ವೇಳೆ ಸಿಬಿಐ ಅಧಿಕಾರಿಗಳು ಆಸ್ತಿಗಳನ್ನು ಗುರುತಿಸಿದ್ದರು. ಸಿಬಿಐ ಪರವಾಗಿ ವಿಶೇಷ ಅಭಿಯೋಜಕ ಗೋವಿಂದನ್ ವಾದಿಸಿದ್ದರು. (ದಿಗ್ವಿಜಯ ನ್ಯೂಸ್​)

    ಆಡಳಿತ ಹಿತದೃಷ್ಟಿಯಿಂದ ಬಿಬಿಎಂಪಿ ವಿಭಜಿಸಲು ಮುಂದಾದ ಸರ್ಕಾರ: ಸಮಿತಿ ರಚನೆ ಮಾಡಿ ಆದೇಶ

    ಹೆತ್ತ ತಾಯಿ ಕೊಂದು ಸೂಟ್​ಕೇಸ್​ನಲ್ಲಿ ಶವಹೊತ್ತು ಪೊಲೀಸ್​ ಠಾಣೆಗೆ ಬಂದ ಮಗಳು!

    ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಬೀಳುವ ಸಾಧ್ಯತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts