ಬೆಂಗಳೂರು: ಹಾಸನ ಸಂಸದ, ಲೋಕಸಭಾ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಇದೀಗ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿರ್ದೇಶಿಸಿದಂತೆ ಈ ಪ್ರಕರಣವನ್ನು ವಿಶೇಷ ತನಿಖಾ ದಳ (SIT) ಕೈಗೆತ್ತಿಕೊಂಡು, ಚುರುಕಿನ ತನಿಖೆ ಆರಂಭಿಸಿದೆ. ಈಗಾಗಲೇ ಮೂರು ಪ್ರತ್ಯೇಕ ತಂಡ ರಚಿಸಿರುವ ಎಸ್ಐಟಿ, ಎಲ್ಲಾ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ: 14 ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಂನಲ್ಲಿ ಭವಿಷ್ಯ ಭದ್ರ: ಮತಯಂತ್ರವಿರುವ ವಿಶ್ವವಿದ್ಯಾನಿಲಯದ ಸುತ್ತ ಸರ್ಪಗಾವಲು
ಲೋಕಸಭಾ ಚುನಾವಣೆಯ ಸಮೀಪದಲ್ಲಿ ಈ ಘಟನೆ ನಡೆದಿರುವುದು ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದು, ಕಾಂಗ್ರೆಸ್ ಪಕ್ಷದ ನಾಯಕರು ಪ್ರಜ್ವಲ್ ರೇವಣ್ಣ, ಎಚ್.ಡಿ. ಕುಮಾರಸ್ವಾಮಿ ಕುಟುಂಬದ ವಿರುದ್ಧ ಕೆಂಡಕಾರಿದ್ದಾರೆ. ಪ್ರಜ್ವಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಪ್ರಕರಣದ ತನಿಖೆ ಆಗಲೇಬೇಕು, ತಕ್ಕ ಶಿಕ್ಷೆ ವಿಧಿಸಬೇಕು. ಈ ಪ್ರಕರಣ ಇಡೀ ರಾಜ್ಯವನ್ನೇ ತಲೆತಗ್ಗಿಸುವಂತೆ ಮಾಡಿದೆ ಎಂದು ಆರೋಪಿಸಿದ್ದಾರೆ. ಇನ್ನು ಲೈಂಗಿಕ ದೌರ್ಜನ್ಯ ವಿಡಿಯೋಗಳು ಹಾಗೂ ಪೆನ್ಡ್ರೈವ್ ಬಗ್ಗೆ ಮಾಹಿತಿ ಕಲೆಹಾಕಿರುವ ಎಸ್ಐಟಿ 40 ಜಿಬಿ ಪೆನ್ಡ್ರೈವ್ ಅನ್ನು ವಶಪಡಿಸಿಕೊಂಡಿದೆ.
ವಿಡಿಯೋಗಳು ಹಾಗೂ ಪೆನ್ಡ್ರೈವ್ ಬಗ್ಗೆ ತನಿಖೆ ನಡೆಸಲು ಎಸ್ಐಟಿಯಿಂದ ಮೂರು ತಂಡಗಳನ್ನು ರಚನೆ ಮಾಡಲಾಗಿದ್ದು, ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ಡ್ರೈವ್ಗಳನ್ನು ವಶಕ್ಕೆ ಪಡೆದಿದ್ದಾರೆ. 32 ಜಿಬಿ ಹಾಗೂ 8 ಜಿಬಿಯ ಪೆನ್ಡ್ರೈವ್ಗಳನ್ನು ವಶಪಡಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).
ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್ ಗಂಭೀರ್
ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು