ಬೆಳಗಾವಿ: ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರು, ವ್ಯಾಪಾರಿಗಳು, ಉದ್ಯಮಿಗಳು ಸೇರಿ ಎಲ್ಲ ವರ್ಗದ ಜನರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಕೆಎಲ್ಇ ವೇಣುಧ್ವನಿ ರೇಡಿಯೋ ಕೇಂದ್ರ ವಿಶೇಷ ಫೋನ್ ಇನ್ ಕಾರ್ಯಕ್ರಮ ನಡೆಸುತ್ತಿದೆ.
ಸಂಕಷ್ಟಕ್ಕೆ ಸಿಲುಕಿದವರು ನಿತ್ಯ ಸಂಜೆ 6.30ರಿಂದ 7ರ ಅವಧಿಯಲ್ಲಿ ಮೊಬೈಲ್ ಸಂಖ್ಯೆ 9019904904ಗೆ ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಬಹುದು. ತಜ್ಞರು ಅಗತ್ಯ ಮಾರ್ಗದರ್ಶನ ನೀಡುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.