ಮೂಲಸೌಕರ್ಯಕ್ಕೆ ವಿಶೇಷ ಆದ್ಯತೆ: ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಭರವಸೆ

ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ವಿುಸಲಾಗುತ್ತಿದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿ ಹಲವು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು. ಬಡವರಿಗೆ ಸೂರು ಕಲ್ಪಿಸುವ ದೃಷ್ಟಿಯಿಂದ 8 ಗ್ರಾಮಗಳ ವ್ಯಾಪ್ತಿಯಲ್ಲಿ 18 ಸಾವಿರ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚಿಕ್ಕಲೂರು, ನೆಲಗುಳಿ, ದೇವಗೆರೆಯಲ್ಲಿ ಮನೆಗಳು ಹಂಚಿಕೆಗೆ ಸಿದ್ಧವಾಗಿದೆ ಎಂದರು. … Continue reading ಮೂಲಸೌಕರ್ಯಕ್ಕೆ ವಿಶೇಷ ಆದ್ಯತೆ: ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಭರವಸೆ