ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ

blank

ಹೊಳೆನರಸೀಪುರ: ಪಟ್ಟಣದ ಕೋಟೆ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ಅಂಗವಾಗಿ ಬುಧವಾರ ವಿಶೇಷ ಪೂಜೆ ನೆರವೇರಿಸಲಾಯಿತು.

ಪಟ್ಟಣದ ಬಲಿಜ ಸಮಾಜದವರು ನಿರ್ವಹಿಸುತ್ತಿರುವ ದೇವಾಲಯದಲ್ಲಿ ಬೆಳಗ್ಗೆ ದೇವಿಗೆ ಪಂಚಾಮೃತ ಅಭಿಷೇಕ ನಡೆಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಿಸಲಾಯಿತು. ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಅರಿಶಿನ ಕುಂಕುಮ ನೀಡಲಾಯಿತು. ಭಕ್ತರು ದೇವಿಗೆ ಮಡಿಲು ತುಂಬಿ ಪ್ರಾರ್ಥನೆ ಸಲ್ಲಿಸಿದರು.

ಭರತ ಹುಣ್ಣಿಮೆ ದಿನ ಬಲಿಜ ಸಮಾಜದವರು ಪ್ರತಿವರ್ಷದಂತೆ ಈ ಬಾರಿಯೂ ವಿಶೇಷ ಪೂಜೆ ಏರ್ಪಡಿಸಲಾಗಿದೆ. ಈ ಬಾರಿ ನಮ್ಮ ಬಾಣಸಿಗರಿಗೆ ಕಡೇ ಘಳಿಗೆಯಲ್ಲಿ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಪುಳಿಯೋಗರೆ, ಮೊಸರನ್ನ ಹಾಗೂ ರಸಾಯನ ಪ್ರಸಾದ ನೀಡಿದ್ದೇವೆ ಎಂದು ಧನ್ಯಕುಮಾರ್ ವಿವರಿಸಿದರು.

ಬಲಿಜ ಸಮಾಜದ ಗೋವಿಂದರಾಜ್, ಎಎಸ್‌ಐ ಸತ್ಯನಾರಾಯಣ, ಎಚ್.ಜಿ. ವೆಂಕಟೇಶ್, ನಾಗೇಂದ್ರ ಸ್ವಾಮಿ, ಜಿತೇಂದ್ರ, ರೇಣುಕಾ ಪ್ರಸಾದ್, ಜಯಮ್ಮ, ನಾಗಣ್ಣ, ಪದ್ಮಾವತಿ, ಶ್ರೀನಿವಾಸ, ಚಂದ್ರಕಲಾ, ರಾದಮ್ಮ, ಭಾಗ್ಯ, ಗಾಯಿತ್ರಮ್ಮ ಇತರರಿದ್ದರು.

 

 

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…