ಕೊಡಗು: ಸಿನಿಮೀಯ ರೀತಿಯಲ್ಲಿ ನಡೆದ ಅಪಘಾತವೊಂದು ವಿಡಿಯೋದಲ್ಲಿ ಸೆರೆಯಾಗಿದ್ದು, ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಡಿಕೇರಿಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಮಡಿಕೇರಿ ತಾಲೂಕಿನ ಮದೆನಾಡು ನಿವಾಸಿ ಬಿ.ಎಸ್.ಧನಂಜಯ (53) ಸಾವಿಗೀಡಾದ ಸವಾರ. ಮಡಿಕೇರಿ-ಮೈಸೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಇವರು ಕಾರಿಗೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿವಿ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ; ಇಲ್ಲಿದೆ ವಿವರ..
ಕಾರಿನಲ್ಲಿ ಹೋಗುತ್ತಿದ್ದ ಪ್ರವಾಸಿಗರು ಎದುರಿನ ರಸ್ತೆಯ ದೃಶ್ಯವನ್ನು ವಿಡಿಯೋ ಮಾಡಿಕೊಂಡು ಸಾಗುತ್ತಿದ್ದರು. ಅದೇ ವೇಳೆಗೆ ಎದುರಿನ ತಿರುವಿನಲ್ಲಿ ವೇಗವಾಗಿ ಬಂದ ದ್ವಿಚಕ್ರವಾಹನ ಕಾರಿಗೆ ಅಪ್ಪಳಿಸಿದ್ದು, ಗಂಭೀರ ಗಾಯಗೊಂಡ ಧನಂಜಯ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಡಿಕೇರಿ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
#LiveAccident: ಸಿನಿಮೀಯ ಅಪಘಾತ..
ವಿವರಗಳಿಗೆ.. https://t.co/YaFZZchf1J ವೀಕ್ಷಿಸಿ..
ಸುದ್ದಿಯ ಲಿಂಕ್ ಕಮೆಂಟ್ನಲ್ಲಿದೆ. pic.twitter.com/ip5nOGEJw5— Vijayavani (@VVani4U) May 28, 2023
ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?
ಹೊಡೆಯುವುದಾದ್ರೆ ಹೊಡೆಯಿರಿ, ಕಡ್ಡಾಯವಾಗಿ ಬಿಲ್ ಕಟ್ಟಿಸಿಕೊಳ್ಳಿ ಅಂದಿದ್ದಾರೆ; ‘ಗ್ಯಾರಂಟಿ’ ತಂದಿಟ್ಟ ಫಜೀತಿ