ಚಾಂಪಿಯನ್ಸ್​ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ 58 ಕೋಟಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ!

blank

CRICKET: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ನಗದು ಬಹುಮಾನ ಘೋಷಣೆ ಮಾಡಿದೆ. ಮಾರ್ಚ್​ 9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್​​ನಲ್ಲಿ ಭಾರತ ಗೆಲುವು ಸಾಧಿಸಿತು. ಹಾಗಾಗಿ ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 58 ಕೋಟಿ ನಗದು ಬಹುಮಾನವನ್ನು ನೀಡುವುದಾಗಿ ಘೋಷಣೆ ಮಾಡಿದೆ.

ಫೈನಲ್ ಪ್ರವೇಶಿಸುವ ಹಾದಿಯಲ್ಲಿ ಭಾರತ ನಾಲ್ಕು ಲೀಗ್​ ಪಂದ್ಯಗಳನ್ನು ಗೆಲ್ಲುವ ಮೂಲಕ ಐಸಿಸಿ ಪಂದ್ಯಾವಳಿಯ ಅತ್ಯಂತ ಪ್ರಬಲ ತಂಡವೆಂದು ಸಾಬೀತುಪಡಿಸಿತು. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯಗಳಿಸಿತು. ನಂತರ ಪಾಕಿಸ್ತಾನವನ್ನು ಆರು ವಿಕೆಟ್‌ಗಳಿಂದ ಸೋಲಿಸಿ, ನ್ಯೂಜಿಲೆಂಡ್​ ವಿರುದ್ಧದ ಪಂದ್ಯಕ್ಕೂ ಮುನ್ನವೇ ಸಮಿಫೈನಲ್​ಗೆ ಅರ್ಹತೆ ಪಡೆಯಿತು. ನಂತರ ನ್ಯೂಜಿಲೆಂಡ್​ ವಿರುದ್ಧದ ಅಂತಿಮ ಲೀಗ್​ ಪಂದ್ಯದಲ್ಲೂ ಜಯಗಳಿಸಿತು. ಬಳಿಕ ಸಮಿಫೈನಲ್​ನಲ್ಲಿ ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್​ಗಳಿಂದ ಸೋಲಿಸಿ, ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸಾಡಿತು.

ಮಾರ್ಚ್ 9 ರಂದು ದುಬೈನಲ್ಲಿ ನಡೆದ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಮತ್ತೊಂದೆಡೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಐಸಿಸಿ 20 ಕೋಟಿ ರೂ. ನೀಡಿದರೆ, ರನ್ನರ್ ಅಪ್ ನ್ಯೂಜಿಲೆಂಡ್‌ಗೆ 9.72 ಕೋಟಿ ರೂ. ನಗದು ಬಹುಮಾನ ನೀಡಿದೆ.

ಬಹುಮಾನದ ಹಣವನ್ನು ಹೇಗೆ ವಿತರಿಸಲಾಗುತ್ತದೆ?
15 ಜನರ ತಂಡದಲ್ಲಿರುವ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐನಿಂದ 3 ಕೋಟಿ ರೂ. ವಿತರಿಸಲಾಗುತ್ತೆ ಎನ್ನಲಾಗಿದೆ. ಇದರ ಜೊತೆಗೆ, 2025ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಸಂಪೂರ್ಣ ಐಸಿಸಿ ಬಹುಮಾನದ ರೂ. 20 ಕೋಟಿ ಹಣವನ್ನು ಟೀಮ್ ಇಂಡಿಯಾ ಆಟಗಾರರು ಮಾತ್ರ ಹಂಚಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಗಂಭೀರ್, ಅಗರ್ಕರ್ ಮತ್ತು ಇತರರಿಗೂ ಬಹುಮಾನದ ಹಣ
ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ಆಟಗಾರರಿಗೆ ನೀಡುವಷ್ಟೇ ರೂ. 3 ಕೋಟ್ಟಿ ಮೊತ್ತವನ್ನು ಪಡೆಯಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐನಿಂದ ಸಹಾಯಕ ಸಿಬ್ಬಂದಿಯ ಪ್ರತಿಯೊಬ್ಬ ಸದಸ್ಯರಿಗೆ ರೂ. 50 ಲಕ್ಷ ನೀಡಲಾಗುವುದು. ಭಾರತದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ರೂ. 30 ಲಕ್ಷ ಮತ್ತು ಇತರ ನಾಲ್ವರು ರಾಷ್ಟ್ರೀಯ ಆಯ್ಕೆದಾರರು ರೂ. 25 ಲಕ್ಷ ಪಡೆಯಲಿದ್ದಾರೆ. ದುಬೈನಲ್ಲಿ ಟೀಮ್ ಇಂಡಿಯಾ ತಂಡದ ಭಾಗವಾಗಿದ್ದ ಬಿಸಿಸಿಐ ಸಿಬ್ಬಂದಿಗೆ ತಲಾ ರೂ. 25 ಲಕ್ಷ ನೀಡಲಾಗುವುದು.

ಚಾಂಪಿಯನ್ಸ್​ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ 58 ಕೋಟಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ!

ಬಿಸಿಸಿಐ ಅಧ್ಯಕ್ಷ ರೋಜರ್ ಹೇಳಿದ್ದೇನು?
ಸತತವಾಗಿ ಐಸಿಸಿ ಪ್ರಶಸ್ತಿಗಳನ್ನು ಗೆಲ್ಲುವುದು ವಿಶೇಷವಾಗಿದೆ ಮತ್ತು ಈ ಬಹುಮಾನವು ಜಾಗತಿಕ ವೇದಿಕೆಯಲ್ಲಿ ಟೀಮ್ ಇಂಡಿಯಾದ ಶಕ್ತಿ ಮತ್ತು ಶ್ರೇಷ್ಠತೆಯನ್ನು ಗುರುತಿಸುತ್ತದೆ ಎಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ತಿಳಿಸಿದ್ದಾರೆ. ನಗದು ಬಹುಮಾನವು ಪ್ರತಿಯೊಬ್ಬರೂ ತೆರೆಮರೆಯಲ್ಲಿ ಮಾಡುವ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಐಸಿಸಿ ಅಂಡರ್ 19 ಮಹಿಳಾ ವಿಶ್ವಕಪ್ ವಿಜಯದ ನಂತರ 2025 ರಲ್ಲಿ ಇದು ನಮ್ಮ ಎರಡನೇ ಐಸಿಸಿ ಟ್ರೋಫಿಯಾಗಿದೆ ಮತ್ತು ಇದು ನಮ್ಮ ದೇಶದಲ್ಲಿ ಜಾರಿಯಲ್ಲಿರುವ ಕ್ರಿಕೆಟ್ ವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ.

ಕಠಿಣ ಪರಿಶ್ರಮಕ್ಕೆ ಸಿಕ್ಕ ಫಲ!
ಇನ್ನೂ ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಕ್ರಿಕೆಟಿಗರು ಮತ್ತು ಸಹಾಯಕ ಸಿಬ್ಬಂದಿಯ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯನ್ನು ಈ ಅರ್ಹ ಬಹುಮಾನದೊಂದಿಗೆ ಗೌರವಿಸಲು ಬಿಸಿಸಿಐ ಹೆಮ್ಮೆಪಡುತ್ತದೆ. ವಿಶ್ವ ಕ್ರಿಕೆಟ್‌ನಲ್ಲಿ ಅವರ ಪ್ರಾಬಲ್ಯವು ವರ್ಷಗಳ ಕಠಿಣ ಪರಿಶ್ರಮ ಮತ್ತು ಕಾರ್ಯತಂತ್ರದ ಕಾರ್ಯಗತಗೊಳಿಸುವಿಕೆಯ ಫಲಿತಾಂಶವಾಗಿದೆ. ಈ ಗೆಲುವು ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಭಾರತದ ಅಗ್ರ ಶ್ರೇಯಾಂಕವನ್ನು ಸಮರ್ಥಿಸಿದೆ. ಮುಂಬರುವ ವರ್ಷಗಳಲ್ಲಿ ತಂಡವು ಉತ್ತಮವಾಗಿ ಮುಂದುವರಿಯುತ್ತದೆ ಎಂದು ನಮಗೆ ಭರವಸೆ ಇದೆ. ಆಟಗಾರರು ತೋರಿಸಿದ ನಿಷ್ಠೆ ಮತ್ತು ಬದ್ಧತೆಗೆ ಸಿಕ್ಕ ಪ್ರತಿಫಲ ಇದಾಗಿದೆ. ಭಾರತೀಯ ಕ್ರಿಕೆಟ್ ಜಾಗತಿಕ ವೇದಿಕೆಯಲ್ಲಿ ಇದು ಹೆಮ್ಮೆಪಡುವ ವಿಷಯ ಎಂದಿದ್ದಾರೆ.

ಚಾಂಪಿಯನ್ಸ್​ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ 58 ಕೋಟಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ!

ಮಂಡಳಿ ಉಪಾಧ್ಯಕ್ಷ ರಾಜೀವ್ ಶುಕ್ಲಾರಿಂದ ಅಭಿನಂದನೆ
ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾತನಾಡಿ, ಈ ವಿಜಯದ ಅಭಿಯಾನವು ಭಾರತದಾದ್ಯಂತ ಉದಯೋನ್ಮುಖ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡುತ್ತದೆ. ಈ ನಗದು ಬಹುಮಾನವು ಪಂದ್ಯಾವಳಿಯುದ್ದಕ್ಕೂ ತಂಡವು ನೀಡಿದ ಅತ್ಯುತ್ತಮ ಪ್ರದರ್ಶನಕ್ಕೆ ಸಲ್ಲುತ್ತದೆ. ಆಟಗಾರರು ಗಮನಾರ್ಹ ಆಟವನ್ನು ಪ್ರದರ್ಶಿಸಿದ್ದಾರೆ ಮತ್ತು ಅವರ ಯಶಸ್ಸು ದೇಶಾದ್ಯಂತದ ಎಲ್ಲಾ ಕ್ರಿಕೆಟಿಗರಿಗೆ ಸ್ಫೂರ್ತಿಯಾಗಿದೆ. ಭಾರತೀಯ ಕ್ರಿಕೆಟ್ ಕೌಶಲ್ಯ, ಮಾನಸಿಕ ದೃಢತೆ ಮತ್ತು ಗೆಲ್ಲುವ ಮನಸ್ಥಿತಿಯ ಬಲವಾದ ನಂಬಿಕೆಯ ಮೇಲೆ ನಿಂತಿದೆ ಎಂದು ತಂಡವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ನಗದು ಬಹುಮಾನ ನೀಡಿ ಗೌರವಿಸಿತ್ತು.

Share This Article

Toilet ಬಳಸಿದ ನಂತರ ಈ ತಪ್ಪು ಎಂದಿಗೂ ಮಾಡಬೇಡಿ: ಅಪಾಯ ಕಾದಿದೆಯಂತೆ!

Toilet : ನಮಲ್ಲಿ ಹಲವರು ಶೌಚಾಲಯ (ಪಾಶ್ಚಾತ್ಯ ಶೌಚಾಲಯ) ಬಳಸಿದ ನಂತರ ಟಾಯ್ಲೆಟ್​ನ ಮುಚ್ಚುಳ ಮುಚ್ಚದೇ…

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips

  Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…