ಆಂಧ್ರಪ್ರದೇಶ: ಸೋಮವಾರ (ಆಗಸ್ಟ್ 28) ಎನ್ಟಿಆರ್ ಅವರಿಗೆ ಗೌರವಾರ್ಥವಾಗಿ 100 ರೂ. ಮುಖಬೆಲೆಯ ನಾಣ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅನಾವರಣಗೊಳಿಸಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ನಂದಮೂರಿ ಅವರ ಕುಟುಂಬ ಮತ್ತು ಆಪ್ತರು ಪಾಲ್ಗೊಂಡಿದ್ದರು. ಸದ್ಯ ಇದರ ಬೆನ್ನಲ್ಲೇ ನಿರ್ದೇಶಕ ರಾಘವೇಂದ್ರ ರಾವ್, ಎನ್ಟಿಆರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಕೊಡಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.
ಇಂದು (ಆಗಸ್ಟ್ 29) ಪ್ರಸಿದ್ಧ ನಿರ್ದೇಶಕ ರಾಘವೇಂದ್ರ ರಾವ್ ಅವರು ನಟನ ಕೊಡುಗೆ ಮತ್ತು ಸಾಧನೆಗಳನ್ನು ಗುರುತಿಸಿದ್ದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು. ತದನಂತರ ಎನ್ಟಿಆರ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಒಂದು ತಿಂಗಳೊಳಗೆ ದಟ್ಟವಾದ ಕೂದಲು ನಿಮ್ಮದಾಗಬೇಕಾ? ನುಗ್ಗೆ ಸೊಪ್ಪು ಬಳಸಿ…
ಈ ಮನವಿಗೆ ವಿವಿಧ ವಲಯಗಳಿಂದ ಕೂಡ ಸಾಕಷ್ಟು ಬೆಂಬಲ ವ್ಯಕ್ತವಾಗಿದ್ದು, ಅನೇಕರು ಅವಾರ್ಡ್ ನೀಡುವಂತೆ ಅಭಿಪ್ರಾಯಿಸಿದ್ದಾರೆ. ರಾಘವೇಂದ್ರ ರಾವ್ ಬೇಡಿಕೆಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ,(ಏಜೆನ್ಸೀಸ್).