ಸಿಡ್ನಿ: ಅತ್ಯಾಚಾರ ಕೇಸ್ನಲ್ಲಿ ಬಂಧನಕ್ಕೆ ಒಳಪಟ್ಟಿರುವ ಶ್ರೀಲಂಕಾ ಕ್ರಿಕೆಟಿಗ ದನುಷ್ಕ ಗುಣತಿಲಕ ಅವರನ್ನು ಎಲ್ಲ ಪ್ರಕಾರದ ಕ್ರಿಕೆಟ್ನಿಂದ ಅಮಾನತು ಮಾಡಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಆದೇಶಿಸಿದೆ.
ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು, ಶ್ರೀಲಂಕಾ ತಂಡದಲ್ಲಿ ಆಡುತ್ತಿದ್ದ ಎಡಗೈ ಬ್ಯಾಟರ್ ಆಗಿರುವ ಗುಣತಿಲಕ ಅವರನ್ನು ಸಿಡ್ನಿ ನಗರ ಪೊಲೀಸರು ಭಾನುವಾರ ಬಂಧಿಸಿದ್ದರು. ಆನ್ಲೈನ್ ಡೇಟಿಂಗ್ ಅಪ್ಲಿಕೇಶನ್ ಮೂಲಕ 29 ವರ್ಷದ ಮಹಿಳೆಯೊಬ್ಬರ ಪರಿಚಯವಾಗಿದೆ. ನ.2ರಂದು ಆ ಮಹಿಳೆ ಮೇಲೆ ರೋಸ್ ಬೇನಲ್ಲಿರುವ ನಿವಾಸದಲ್ಲಿ ಗುಣತಿಲಕ ಅವರು ಅತ್ಯಾಚಾರ ಮಾಡಿದ್ದಾರೆ ಎಂದು ಕೇಸ್ ದಾಖಲಾಗಿದೆ.
ಆನ್ಲೈನ್ನಲ್ಲೇ ಹಲವಾರು ದಿನಗಳವರೆಗೆ ಸಂವಹನ ನಡೆಸಿದೆವು. ಬಳಿಕ ಇಬ್ಬರೂ ಭೇಟಿಯಾದೆವು. ನ.2ರ ಸಂಜೆ ನನ್ನ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾಳೆ.
2015ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಣತಿಲಕ ಪಾದರ್ಪಣೆ ಮಾಡಿದ್ದರು. ಟಿ20 ವಿಶ್ವಕಪ್ ಟೂರ್ನಿ ಹಿನ್ನೆಲೆ ಆಸ್ಟ್ರೇಲಿಯಾಕ್ಕೆ ಆಗಮಿಸಿದ್ದರು. ರೇಪ್ ಕೇಸ್ನಲ್ಲಿ ಸಿಲುಕಿದ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಕ್ರಿಕೆಟ್ನಿಂದಲೇ ಅಮಾನತು ಆಗಿದ್ದಾರೆ. ಇನ್ನು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತ ಶ್ರೀಲಂಕಾ ತಂಡ ತವರಿಗೆ ಮರಳಿದೆ.
ಚಂದ್ರು ಸಾವಿನ ಪ್ರಕರಣ: ಗೌರಿಗದ್ದೆ ಆಶ್ರಮಕ್ಕೆ ತನಿಖಾ ತಂಡ ಭೇಟಿ, ವಿನಯ್ ಗುರೂಜಿಯನ್ನೂ ವಿಚಾರಣೆ ನಡೆಸಿದ ಪೊಲೀಸರು