ಬೆಂಗಳೂರು: ಕನ್ನಡ ಚಿತ್ರರಂಗದ ಮೊದಲ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷಗಳಾದ ಹಿನ್ನೆಲೆಯಲ್ಲಿ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಯನ್ನು ಸ್ಥಾಪಿಸಿದ್ದರು. ಈಗ ಪ್ರಶಸ್ತಿ ಪ್ರದಾನ ಸಮಾರಂಭವು 22ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಬಾರಿ ಹಿರಿಯ ನಟ ಶ್ರೀನಿವಾಸಮೂರ್ತಿ, ನಿರ್ದೇಶಕ ಸಾಯಿಪ್ರಕಾಶ್, ಗಾಯಕ ರಾಜೇಶ್ ಕೃಷ್ಣನ್ ಮುಂತಾದವರಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಇದನ್ನೂ ಓದಿ: ಇನ್ನೊಂದು ಚಿತ್ರದಲ್ಲಿ ಮಂಡ್ಯ ರಮೇಶ್ ಮಗಳು ದಿಶಾ … ಯಾವುದು ಗೊತ್ತಾ?
ಡಿ.ವಿ, ಸುಧೀಂದ್ರ ಅವರು ಪ್ರಾರಂಭಿಸಿದ ಈ ಸಂಪ್ರದಾಯವನ್ನು ಅವರ ನಿಧನದ ನಂತರ ಅವರ ಸಂಬಂಧಿ ಸುಧೀಂದ್ರ ವೆಂಕಟೇಶ್ ಮುಂದುವರೆಸಿಕೊಂಡು ಬಂದಿದ್ದು, ಈ ವರ್ಷ ಸುಧೀಂದ್ರ ಅವರ ಜನ್ಮದಿನದಂದು (ಜನವರಿ 25), ಈ ಸಮಾರಂಭವನ್ನು ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ಸಂಜೆ 5ಕ್ಕೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸಂಸ್ಥೆಯ 47ನೇ ವಾರ್ಷಿಕೋತ್ಸವ ಹಾಗೂ 21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲು ತೀರ್ಮಾನಿಸಲಾಗಿದೆ.
22 ವರ್ಷಗಳ ಹಿಂದೆ ಕೇವಲ ಎರಡು ಪ್ರಶಸ್ತಿಗಳಿಂದ ಪ್ರಾರಂಭವಾದ ಈ ಸಮಾರಂಭಕ್ಕೆ ಆಗಮಿಸಿದ ಗಣ್ಯರು, ಈ ಸಂಸ್ಥೆಯ ಮೂಲಕ ಪ್ರಶಸ್ತಿ ಪ್ರದಾನ ಮಾಡಲು ಮುಂದಾಗಿದ್ದರು. ಹೀಗೆ ಆರಂಭವಾದ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲೀಗ 11 ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಸೀಮಿತವಾಗದೆ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ನರಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಇದನ್ನೂ ಓದಿ: ಮೂರು ದಶಕಗಳ ವೈರತ್ವಕ್ಕೆ ತಾರಕ್ ಮತ್ತು ರಾಮ್ಚರಣ್ ಅಂತ್ಯ ಹಾಡಿದ್ದು ಹೇಗೆ?
ಈ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟಿಯರಾದ ರಾಗಿಣಿ, ‘ಎ’ ಖ್ಯಾತಿಯ ಚಾಂದಿನಿ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪ್ರಶಸ್ತಿಗಳ ವಿವರ
2021
ಪಿ. ಧನರಾಜ್ – ಹಿರಿಯ ಚಲನಚಿತ್ರ ನಿರ್ಮಾಪಕರು – ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
ಈಶ್ಚರ ದೈತೋಟ – ಹಿರಿಯ ಪತ್ರಕರ್ತರು – ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
2022
ಕುಮಾರ್ ಗೋವಿಂದ್ – ಹಿರಿಯ ನಟ-ನಿರ್ಮಾಪಕರು – ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
ಸದಾಶಿವ ಶೆಣೈ – ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು – ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
ರಾಜೇಶ್ ಕೃಷ್ಣನ್ – ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ
ಸಾಯಿಪ್ರಕಾಶ್ – ‘ಯಜಮಾನ’ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ, ಭಾರತಿ ವಿಷ್ಣುವರ್ಧನ್ ಅವರಿಂದ
ಶ್ರೀಮತಿ ತುಳಸಿ – ಹಿರಿಯ ಪೋಷಕ ನಟಿ, ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ
ನೋಬಿನ್ ಪಾಲ್ – ಅತ್ಯುತ್ತಮ ಸಂಗೀತ ನಿರ್ದೇಶನ, ‘777 ಚಾರ್ಲಿ’ ಚಿತ್ರಕ್ಕಾಗಿ – ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ ಲಿ ಪ್ರಶಸ್ತಿ
ಮಧುಚಂದ್ರ – ಅತ್ಯುತ್ತಮ ಕಥಾಲೇಖಕರು, ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರಕ್ಕಾಗಿ ಕೆ.ವಿ. ಜಯರಾಂ ಪ್ರಶಸ್ತಿ
ಎಂ.ಜಿ. ಶ್ರೀನಿವಾಸ್ (ಶ್ರೀನಿ) – ಅತ್ಯುತ್ತಮ ಸಂಭಾಷಣೆ, ‘ಓಲ್ಡ್ ಮಾಂಕ್’ ಚಿತ್ರಕ್ಕಾಗಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ, ಡಾ.ಎಚ್.ಕೆ. ನರಹರಿ ಅವರಿಂದ
ಕಿರಣ್ ರಾಜ್ (‘777 ಚಾರ್ಲಿ’) – ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ ಬಿ. ಸುರೇಶ ಪ್ರಶಸ್ತಿ
ಪ್ರಮೋದ್ ಮರವಂತೆ – ‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ …’ ಗೀತರಚನೆಗಾಗಿ – ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ
ಶ್ರೀನಿವಾಸಮೂರ್ತಿ – ಹಿರಿಯ ಪೋಷಕ ಕಲಾವಿದರು, ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ, ಶ್ರೀಮತಿ ನಾಗಮಣಿ ಸೀತಾರಾಂ ಕುಟುಂಬದವರಿಂದ